Advertisement

ನಿಯಮಗಳಂತೆಯೇ ನ್ಯಾ. ಮುರಳೀಧರ್ ವರ್ಗಾವಣೆ: ರವಿಶಂಕರ್ ಪ್ರಸಾದ್ ಸ್ಪಷ್ಟನೆ

09:29 AM Feb 28, 2020 | keerthan |

ಹೊಸದಿಲ್ಲಿ: ಕೊಲಿಜಿಯಂ ವ್ಯವಸ್ಥೆಯ ನಿಯಮಾವಳಿಗಳಂತೆಯೇ ನ್ಯಾಯಮೂರ್ತಿ ಮುರಳೀಧರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.

Advertisement

ದಿಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ್ದ ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗದೇ ಇರುವುದನ್ನು ಪ್ರಶ್ನಿಸಿ ದಿಲ್ಲಿ ಹೈಕೋರ್ಟ್ ನ್ಯಾಯಾಧೀಶರಾದ ಮುರಳೀಧರ್ ಅವರು ಕೇಂದ್ರ ಸರಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರ ಬೆನ್ನಿಗೆ ಕಳೆದ ರಾತ್ರಿಯೇ ರಾಷ್ಟ್ರಪತಿಯವರು ಮುರಳೀಧರ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ವರ್ಗಾವಣೆ ಮಾಡಿ ಆದೇಶಿಸಿದ್ದರು.

ನ್ಯಾ. ಮುರಳೀಧರ್ ಅವರ ವರ್ಗಾವಣೆ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಆರೋಪಿಸಿದ್ದು, ಸಚಿವ ರವಿಶಂಕರ್ ಪ್ರಸಾದ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಮುರಳೀಧರ್ ಅವರ ವರ್ಗಾವಣೆ ರಾತ್ರೋರಾತ್ರಿ ಆಗಿದ್ದಲ್ಲ. 14 ದಿನಗಳ ಹಿಂದೆಯೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಈ ಬಗ್ಗೆ ಶಿಫಾರಸ್ಸು ಮಾಡಿದ್ದರು ಎಂದಿದ್ದಾರೆ.

ಸುಪ್ರೀಂ ಕೋರ್ಟ್ ನ ಕೊಲಿಜಿಯಂ ವ್ಯವಸ್ಥೆಯ ಪ್ರಕಾರವೇ ವರ್ಗಾವಣೆ ನಡೆದಿದೆ, ಇದರಲ್ಲಿ ಯಾವುದೇ ರಾಜಕೀಯವಿಲ್ಲ. ಕಾಂಗ್ರೆಸ್ ಆರೋಪದಲ್ಲಿ ಹುರುಳಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next