Advertisement

ಶೀಘ್ರ ಸಚಿವ ಪ್ರಸಾದ್‌, ಸಿಜೆಐ ಭೇಟಿ

09:50 AM Apr 16, 2018 | Team Udayavani |

ಹೊಸದಿಲ್ಲಿ: ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಜಿಲ್ಲಾಮಟ್ಟದ ನ್ಯಾಯಾಧೀಶರೊಬ್ಬರನ್ನು ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಿಸುವ ಶಿಫಾರಸು ಕುರಿತಂತೆ ಎದ್ದಿರುವ ವಿವಾದ, ಉನ್ನತ ನ್ಯಾಯಾಂಗ ನೇಮಕ ಪ್ರಕ್ರಿಯೆಯಲ್ಲಿ ವಿಳಂಬ ಸಹಿತ ಹಲವಾರು ಪ್ರಕರಣಗಳಲ್ಲಿ ಕಾರ್ಯಾಂಗ ಹಾಗೂ ನ್ಯಾಯಾಂಗದ ನಡುವೆ ಎದ್ದಿರುವ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳುವ ಉದ್ದೇಶದಿಂದ ಇದೇ ತಿಂಗಳಲ್ಲಿ ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಅವರು, ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

Advertisement

ಈ ಉದ್ದೇಶಿತ ಭೇಟಿಯಲ್ಲಿ ಚರ್ಚಿಸಬೇಕಾದ ವಿಚಾರಗಳನ್ನು ಕೇಂದ್ರ ಕಾನೂನು ಸಚಿವಾಲಯದ ಅಧೀನದಲ್ಲಿರುವ ಕಾನೂನು ಇಲಾಖೆಯು ಪಟ್ಟಿ ಮಾಡಿ, ಸಚಿವರಿಗೆ ಕೊಟ್ಟಿದೆ ಎಂದು ಹೇಳಲಾಗಿದೆ. ಇದೇ ವೇಳೆ, ಈ ಭೇಟಿಯಲ್ಲಿ ವಿಶೇಷವೇನೂ ಇಲ್ಲ ಎಂದು ಸಚಿವಾಲಯ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next