Advertisement

ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲು ಮುಂದಾದರೆ ರವೀಂದ್ರ ಜಡೇಜಾ?

02:25 PM Dec 11, 2021 | Team Udayavani |

ಮುಂಬೈ: ಭಾರತ ತಂಡದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಅವರು ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಲು ಮುಂದಾಗಿದ್ದಾರೆ ಎಂದು ವರದಿ ತಿಳಿಸಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರವೀಂದ್ರ ಜಡೇಜಾ ಈ ನಿರ್ಧಾರ ಮಾಡಿದ್ದಾರೆಂದು ವರದಿಯಾಗಿದೆ.

Advertisement

ಸದ್ಯ ಮೊಣಕಾಲಿನ ಗಾಯದಿಂದ ಬಳಲುತ್ತಿರುವ ಸ್ಟಾರ್ ಆಲ್ ರೌಂಡರ್ ಜಡೇಜಾ ಸುಮಾರು ಆರು ತಿಂಗಳವರೆಗೆ ಅಲಭ್ಯರಾಗುತ್ತಾರೆ. ಜಡೇಜಾ ಅವರು ತಮ್ಮ ವೃತ್ತಿಜೀವನವನ್ನು ಸೀಮಿತ ಮಾದರಿಯಲ್ಲಿ ವಿಸ್ತರಿಸಲು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ತೆಗೆದುಕೊಳ್ಳುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಅವರ ತಂಡದ ಸಹ ಆಟಗಾರರೊಬ್ಬರು ದೈನಿಕ್ ಜಾಗರನ್‌ ಗೆ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ:ಆ್ಯಶಸ್ ಟ್ರೋಫಿ: ಸತತ ವಿಕೆಟ್ ಕಳೆದುಕೊಂಡ ಇಂಗ್ಲೆಂಡ್, ಮೊದಲ ಪಂದ್ಯ ಗೆದ್ದ ಆಸ್ಟ್ರೇಲಿಯಾ

ಟೆಸ್ಟ್ ಮಾದರಿಯನ್ನು ತೊರೆದು ರವೀಂದ್ರ ಜಡೇಜಾ ಅವರು ಏಕದಿನ, ಟಿ20 ಮತ್ತು ಐಪಿಎಲ್ ನಲ್ಲಿ ಆಡಲು ಬಯಸುತ್ತಾರೆ ಎಂದು ವರದಿಯಾಗಿದೆ.

ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಆಡಿದ್ದ ರವೀಂದ್ರ ಜಡೇಜಾ, ಎರಡನೇ ಪಂದ್ಯದಲ್ಲಿ ಗಾಯದಿಂದ ಆಡಿರಲಿಲ್ಲ. ಮುಂದೆ ನಡೆಯಲಿರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಅವರನ್ನು ಆಯ್ಕೆ ಮಾಡಲಾಗಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next