Advertisement

Kaup: ಸಮುದ್ರ ಕಿನಾರೆಯಲ್ಲಿ ರವಿಶಂಕರ್ ಗುರೂಜಿ ಅವರಿಂದ ಆನಂದ ಲಹರಿ ಮಹಾಸತ್ಸಂಗ

09:57 PM Feb 20, 2024 | Team Udayavani |

ಕಾಪು : ಮಾನವತಾವಾದಿ ಹಾಗೂ ಶಾಂತಿದೂತ, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತರಾಗಿರುವ, ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಜೀವನ ಕಲಾ ಸಂಸ್ಥೆ ಆರ್ಟ್ ಆಫ್ ಲೀವಿಂಗ್ ನ ಸಂಸ್ಥಾಪಕ, ಪದ್ಮವಿಭೂಷಣ ಶ್ರೀ ರವಿಶಂಕರ್ ಗುರೂಜಿ ಅವರು ಕಾಪುವಿನ ಸಮುದ್ರ ಕಿನಾರೆಯಲ್ಲಿರುವ ಮಂಥನ ಬೀಚ್ ರೆಸಾರ್ಟ್ ನ ಬಳಿ ಮಂಗಳವಾರ “ ಆನಂದ ಲಹರಿ ” ಮಹಾಸತ್ಸಂಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Advertisement

ಕಾಪು ಶಾಸಕ ಮತ್ತು ಗುರ್ಮೆ ಫೌಂಡೇಷನ್ ಪ್ರವರ್ತಕರಾದ ಗುರ್ಮೆ ಸುರೇಶ್ ಪಿ. ಶೆಟ್ಟಿ ಮತ್ತು ಸಹೋದರರಾದ ಹರೀಶ್ ಪಿ. ಶೆಟ್ಟಿ ಗುರ್ಮೆ, ಸತೀಶ್ ಪಿ. ಶೆಟ್ಟಿ ಗುರ್ಮೆ ನೇತೃತ್ವದಲ್ಲಿ ಎಲ್ಲಾ ಸಮಾಜ ಭಾಂದವರು ಮತ್ತು ಆರ್ಟ್ ಆಫ್ ಲೀವಿಂಗ್ ಬಳಗದವರ ಸಹಭಾಗಿತ್ವದೊಂದಿಗೆ ಆನಂದ ಲಹರಿ ಮಹಾಸತ್ಸಂಗ ಕಾರ್ಯಕ್ರಮ ಸಂಪನ್ನಗೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next