Advertisement

ಹುಡುಗಿ ವಿಚಾರದಲ್ಲಿ ಗಲಾಟೆ: ಕಟ್ಟಿಗೆಯಿಂದ ಹೊಡೆದು ಉಪನ್ಯಾಸಕನ ಮೇಲೆ ವಿದ್ಯಾರ್ಥಿಗಳ ಹಲ್ಲೆ

09:55 AM Jan 04, 2020 | keerthan |

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಪ್ರಾಣೇಶ ಕುಲಕರ್ಣಿ ಮೇಲೆ ವಿದ್ಯಾರ್ಥಿ ಗುಂಪು ಹಲ್ಲೆ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

Advertisement

ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹುಡುಗಿ ವಿಚಾರವಾಗಿ ಘರ್ಷಣೆ ನಡೆದಿತ್ತು. ಇದಕ್ಕೆ ಸಂಬಂಧಿಸಿ ಉಪನ್ಯಾಸಕರು ಉಭಯ ಗುಂಪುಗಳ ವಿದ್ಯಾರ್ಥಿಗಳನ್ನು ಕರೆದು ವಿಚಾರಿಸಿದ್ದರು. ಒಂದು ತಂಡದ ವಿದ್ಯಾರ್ಥಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು ಎಂದು ತಿಳಿದು ಬಂದಿದೆ. ಇದನ್ನು ಮನಸಿಲ್ಲಿಟ್ಟುಕೊಂಡು ಹಗೆ ಸಾಧಿಸಿದ ವಿದ್ಯಾರ್ಥಿಗಳ ತಂಡ ಗುರುವಾರ ಕೃಷಿ ವಿವಿ ಬಳಿ ಹಲ್ಲೆ ನಡೆಸಿದೆ.

ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳ ತಂಡದಿಂದ ಕಟ್ಟಿಗೆಯಿಂದ ಹೊಡೆದು ಗಂಭೀರವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಪ್ರಾಣೇಶ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಉಪನ್ಯಾಸಕ ಪ್ರಾಣೇಶ ಕುಲಕರ್ಣಿ ಆರು ಜನ ವಿದ್ಯಾರ್ಥಿಗಳ ವಿರುದ್ಧ ಪಶ್ಚಿಮ ಠಾಣೆಗೆ ದೂರು ನೀಡಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಶುಕ್ರವಾರ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next