Advertisement

ದೇಶದ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ

01:39 PM Apr 20, 2019 | Naveen |

ಸಿಂಧನೂರು: ಕಳೆದ ಐದು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನೇಕ ಅಭಿವೃದ್ಧಿ ಕಾಮಗಾರಿ ಜಾರಿಗೆ ತಂದಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಯೋಜನೆಗಳು ದೇಶದಲ್ಲಿ ಜಾರಿಯಾಗಲು ಮತ್ತೂಮ್ಮೆ ಬಿಜೆಪಿಗೆ ಮತ ಹಾಕಬೇಕು ಎಂದು ಕೊಪ್ಪಳ ಲೋಕಸಭೆ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಹೇಳಿದರು.

Advertisement

ತಾಲೂಕಿನ ಆರ್‌.ಎಚ್‌ ನಂ-3ರಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಐದು ವರ್ಷದಲ್ಲಿ ಇಡೀ ವಿಶ್ವವೇ ಭಾರತದತ್ತ ನೋಡುವಂತೆ ಮಾಡಿದ ವ್ಯಕ್ತಿ ನರೇಂದ್ರ ಮೋದಿ. ಅವರಿಗೆ ಇನ್ನೂ ಸ್ವಲ್ಪ ಕಾಲಾವಕಾಶ ಕೊಟ್ಟರೆ ಭಾರತವನ್ನು ನಂಬರ್‌
1 ಮಾಡಲು ಮುಂದಾಗುತ್ತಾರೆ. ಆದ್ದರಿಂದ ಪ್ರತಿಯೊಬ್ಬರೂ ಮತ್ತೂಮ್ಮೆ ಬಿಜೆಪಿಗೆ ಮತ ಹಾಕಬೇಕು. ಕಳೆದ ಬಾರಿ ಆಶೀರ್ವದಿಸಿದಂತೆ ಈ ಬಾರಿಯೂ ನನಗೆ ಮತ ಹಾಕಿ ಗೆಲ್ಲಿಸಬೇಕು ಎಂದು
ಮನವಿ ಮಾಡಿದರು.

ತಾಲೂಕು ಅಧ್ಯಕ್ಷ್ಯ ಅಮರೇಗೌಡ ವಿರುಪಾಪೂರ ಮಾತನಾಡಿ, ಲೋಕಸಭೆ ಚುನಾವಣೆ ರೈತರ ಚುನಾವಣೆಯಾಗಿದ್ದು, ರೈತರ ಏಳ್ಗೆಗಾಗಿ ಬಿಜೆಪಿ ಬೆಂಬಲಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಸಂಗಣ್ಣ ಕರಡಿ ಸಿಂಧನೂರು ತಾಲೂಕಿನಲ್ಲಿ ಪ್ರಚಾರ ಕಾರ್ಯದಲ್ಲಿಯೂ ಬಿಡುವು
ಮಾಡಿಕೊಂಡು ನಾನಾ ದೇವಸ್ಥಾನಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು.ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ , ಸದಸ್ಯ ಎನ್‌. ಶಿವನಗೌಡ ಗೊರೇಬಾಳ, ದೇವೇಂದ್ರಪ್ಪ,ಪರಮೇಶ್ವರಪ್ಪ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next