Advertisement

ರಾಯಚೂರಿನಲ್ಲಿ ಎರಡು ಪ್ರತ್ಯೇಕ ಅಪಘಾತ: ವ್ಯಕ್ತಿ ಸಾವು, ಮೂವರಿಗೆ ಗಾಯ

10:15 AM Mar 17, 2020 | keerthan |

ರಾಯಚೂರು: ಎರಡು ಪ್ರತ್ಯೇಕ ಅಪಘಾತಗಳಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು ಮೂವರಿಗೆ ಗಂಭೀರ ಗಾಯಗಳಾದ ಘಟನೆ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಜರುಗಿದೆ.

Advertisement

ರವಿವಾರ ತಡರಾತ್ರಿ ತಾಲೂಕಿನ ಹೆಗ್ಗಸಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಚಾಲಕ ವೀರೇಶ (35) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ರಾಯಚೂರಿನ ಮೇದಾರವಾಡಿ ನಿವಾಸಿಯಾಗಿದ್ದ ವೀರೇಶ ಹೈದರಾಬಾದ್ ಕಡೆಯಿಂದ ರಾಯಚೂರಿಗೆ ಬರುತ್ತಿದ್ದರು.

ಇನ್ನು ಯರಮರಸ್ ಬಳಿಯ ಕೆಎಂಎಫ್ ನಂದಿನಿ ಹಾಲಿನ ಡೈರಿ ಬಳಿ ಇನ್ನೋವಾ ಕಾರು ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ. ಹೈದರಾಬಾದ್ ಮೂಲದ ಮೂವರು ರಾಯಚೂರಿಗೆ ದನದ ಸಂತೆಗೆಂದು ಬರುತಿದ್ದರು.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದರಲ್ಲಿ ಸಿಕ್ಕಿಕೊಂಡಿದ್ದ ಚಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಹೊರ ತೆಗೆದಿದ್ದಾರೆ. ಚಾಲಕನ ಸ್ಥಿತಿ ಗಂಭೀರವಾಗಿದ್ದು, ಕೈ ಕಾಲು ಮುರಿದು ಹೋಗಿವೆ. ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.  ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪಿಎಸ್ ಐ ಸಾಬಯ್ಯ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next