Advertisement

ಆರ್‌.ಬಿ.ತಿಮ್ಮಾಪೂರಗೆ ಪ್ರಬಲ ಖಾತೆಗೆ ಮನವಿ

12:08 AM Jun 27, 2019 | Team Udayavani |

ಬೆಂಗಳೂರು: ಆರ್‌.ಬಿ.ತಿಮ್ಮಾಪೂರ ಅವರಿಗೆ ಮೈತ್ರಿ ಸರ್ಕಾರದಲ್ಲಿ ಪ್ರಬಲ ಖಾತೆ ನೀಡುವಂತೆ ಮಾದಿಗ ಸಮುದಾಯದ ಮುಖಂಡರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ಗೆ ಮನವಿ ಮಾಡಿದ್ದಾರೆ.

Advertisement

ಎಸ್ಸಿ/ಎಸ್ಟಿ ಸಮುದಾಯಗಳಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯದವರಿಗೆ ಅನ್ಯಾಯ ಮಾಡುತ್ತಿರುವುದು ಕಂಡು ಬರುತ್ತಿದೆ. ಬಲಗೈ ಸಮುದಾಯಕ್ಕೆ ಸೇರಿರುವ ಡಾ. ಜಿ.ಪರಮೇಶ್ವರ್‌ಗೆ ಉಪ ಮುಖ್ಯಮಂತ್ರಿ ಸ್ಥಾನ, ಪ್ರಿಯಾಂಕ್‌ ಖರ್ಗೆಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ.

ಆದರೆ, ಆರ್‌.ಬಿ.ತಿಮ್ಮಾಪೂರ ಅವರಿಗೆ ಸಕ್ಕರೆ ಖಾತೆ ನೀಡಲಾಗಿದೆ. ಅದರೊಂದಿಗೆ ಬಂದರು ಹಾಗೂ ಒಳನಾಡು ಸಾರಿಗೆ ಖಾತೆ ನೀಡುವಂತೆ ಹೈಕಮಾಂಡ್‌ ಆದೇಶ ನೀಡಿದ್ದರೂ, ಖಾತೆ ಹಂಚಿಕೆ ಮಾಡದೇ ಅನ್ಯಾಯ ಮಾಡಲಾಗುತ್ತಿದೆ. ಅದನ್ನು ಸರಿಪಡಿಸುವಂತೆ ವೇಣುಗೋಪಾಲ್‌ಗೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next