Advertisement

ವೈಯಕ್ತಿಕ ಕಾರಣ : ಆರ್‌ಬಿಐ ಗವರ್ನರ್‌ ಊರ್ಜಿತ್‌ ಪಟೇಲ್‌ ರಾಜೀನಾಮೆ

05:43 PM Dec 10, 2018 | Team Udayavani |

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ ಗವರ್ನರ್‌ ಊರ್ಜಿತ್‌ ಪಟೇಲ್‌ ಅವರು ವೈಯಕ್ತಿಕ ಕಾರಣಗಳಿಗಾಗಿ, ತಮ್ಮ ಹುದ್ದೆಗೆ ತತ್‌ಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ.

Advertisement

‘ಕಳೆದ ಕೆಲವು ವರ್ಷಗಳಿಂದ ಆರ್‌ಬಿಐ ನಲ್ಲಿ ವಿವಿಧ ಹುದ್ದೆಗಳಲ್ಲಿದ್ದುಕೊಂಡು ಸೇವೆ ಸಲ್ಲಿಸುವುದಕ್ಕೆ ಅವಕಾಶ ದೊರಕಿದುದು ನನ್ನ ಪಾಲಿನ ಭಾಗ್ಯವೇ ಆಗಿದೆ. ನನ್ನ ಕರ್ತವ್ಯ ನಿರ್ವಹಣೆಯಲ್ಲಿ ನನಗೆ ಬೆಂಬಲ, ಪ್ರೋತ್ಸಾಹ, ಸಹಕಾರ ನೀಡಿದ ಎಲ್ಲ ಸಹೋದ್ಯೋಗಿಗಳಿಗೆ, ಸಿಬಂದಿಗೆ ನನ್ನ ಧನ್ಯವಾದಗಳು’ ಎಂದು ಊರ್ಜಿತ್‌ ಪಟೇಲ್‌ ಹೇಳಿಕೆಯೊಂದರಲ್ಲಿ  ಹೇಳಿದ್ದಾರೆ. 

ನಗದು ನಿರ್ವಹಣೆ, ಮೀಸಲು ನಿಧಿ, ಎನ್‌ಪಿಎ ಬಾಧಿತ ಬ್ಯಾಂಕುಗಳಿಗೆ ಆರ್‌ಬಿಐ ನಿರ್ಬಂಧ ಇವೇ ಮೊದಲಾದ ವಿಷಯಗಳು ಈಚಿನ ದಿನಗಳಲ್ಲಿ ಕೇಂದ್ರ ಸರಕಾರ ಮತ್ತು ಆರ್‌ಬಿಐ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿದ್ದವು. 

Advertisement

Udayavani is now on Telegram. Click here to join our channel and stay updated with the latest news.

Next