Advertisement

RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ

09:52 PM May 18, 2024 | Team Udayavani |

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಶನಿವಾರ ನಡೆಯುತ್ತಿರುವ ರೋಚಕ ಐಪಿಎಲ್ ಹಣಾಹಣಿಗೆ ನಿರೀಕ್ಷೆಯಂತೆ ಮಳೆ ಅಡ್ಡಿ ಪಡಿಸಿದೆ.

Advertisement

ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಸಮಯಕ್ಕೆ ಸರಿಯಾಗಿ ಪಂದ್ಯ ಆರಂಭವಾಯಿತು ಆದರೆ 3 ಓವರ್ ಆಗುವಷ್ಟರಲ್ಲಿ ಮಳೆ ಸುರಿಯಿತು. ಆರ್ ಸಿಬಿ 31 ರನ್ ಗಳಿಸಿದೆ. ಕೊಹ್ಲಿ 19 ರನ್ ಮತ್ತು ನಾಯಕ ಫ್ಲೆಸಿಸ್ 12 ರನ್ ಗಳಿಸಿ ಆಟವಾಡುತ್ತಿದ್ದಾರೆ.

ತಂಡಗಳು
ಆರ್ ಸಿಬಿ : ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮರಾನ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್

ಚೆನ್ನೈ : ರುತುರಾಜ್ ಗಾಯಕ್ವಾಡ್ (ನಾಯಕ), ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್, ಮಹೇಶ್ ತೀಕ್ಷಣ

Advertisement

Udayavani is now on Telegram. Click here to join our channel and stay updated with the latest news.

Next