Advertisement

ಕೆಕೆಆರ್ ತಂಡದ ಇಬ್ಬರಿಗೆ ಕೋವಿಡ್ ಪಾಸಿಟಿವ್: ಆರ್ ಸಿಬಿ ವಿರುದ್ಧದ ಪಂದ್ಯ ಮುಂದೂಡಿಕೆ

01:08 PM May 03, 2021 | Team Udayavani |

ಅಹಮದಾಬಾದ್: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, ಪರಿಣಾಮ ಇಂದು ನಡೆಯಬೇಕಾಗಿದ್ದ ಕೆಕೆಆರ್ ಮತ್ತು ಆರ್ ಸಿಬಿ ನಡುವಿನ ಪಂದ್ಯವನ್ನು ಮುಂದೂಡಲಾಗಿದೆ.

Advertisement

ಕೆಕೆಆರ್ ತಂಡದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಗೆ ಕೋವಿಡ್ ಸೋಂಕು ದೃಢವಾಗಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಎಲ್ಲಾ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಎಲ್ಲರೂ ಹೋಟೆಲ್ ನಲ್ಲಿ ಐಸೋಲೇಶನ್ ಗೆ ಒಳಗಾಗಿದ್ದಾರೆ. ಐಪಿಎಲ್ ಆರಂಭಕ್ಕೂ ಮುನ್ನವೇ ಕೆಕೆಆರ್ ನ ನಿತೀಶ್ ರಾಣಾ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಗಣಮುಖರಾದ ಬಳಿಕವೇ ಅವರು ತಂಡದೊಂದಿಗೆ ಸೇರಿದ್ದರು.

ಇದನ್ನೂ ಓದಿ:ಶಿವಮೊಗ್ಗದ ಅಭಿಮಾನಿಯ ಚಿತ್ರಕಲೆಯನ್ನು ಶ್ಲಾಘಿಸಿದ ಎಬಿ ಡಿವಿಲಿಯರ್ಸ್

ಇದೀಗ ಇಯಾನ್ ಮಾರ್ಗನ್ ಪಡೆಯ ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ.

ಅಹಮದಾಬಾದ್ ನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಪಂದ್ಯ ಆಯೋಜಿಸಲಾಗಿತ್ತು. ಆದರೆ ಈ ದಿಢೀರ್ ಬೆಳವಣಿಗೆಯಿಂದ ಈ ಪಂದ್ಯವನ್ನು ಮುಂದೂಡಲಾಗಿದೆ. ಈ ಪಂದ್ಯ ಮೇ 30ರಂದು ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next