Advertisement

ಜಯದೊಂದಿಗೆ ಮುಗಿಯಲಿ ಅಭಿಯಾನ: ಸೀಸನ್ ನ ಕೊನೆಯ ಪಂದ್ಯಕ್ಕೆ ಸ್ಮೃತಿ ಟೀಂ ರೆಡಿ

04:09 PM Mar 21, 2023 | Team Udayavani |

ಮುಂಬೈ: ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್ ನಲ್ಲಿ ಆರಂಭದಲ್ಲಿ ನಿರೀಕ್ಷಿತ ಪ್ರದರ್ಶನ ನೀಡದೆ ಸೆಮಿ ರೇಸ್ ನಿಂದ ಹೊರಬಿದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ತನ್ನ ಕೊನೆಯ ಪಂದ್ಯವಾಡುತ್ತಿದೆ.

Advertisement

ಡಿವೈ ಪಾಟೀಲ್ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಆರ್ ಸಿಬಿ ತಂಡಗಳು ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಮುಂಬೈ ನಾಯಕಿ ಹರ್ಮನ್ ಕೌರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಸತತ ಏಳು ಟಾಸ್ ಸೋತಿದ್ದ ಹರ್ಮನ್ ಇಂದು ಮೊದಲ ಬಾರಿಗೆ ಟಾಸ್ ಗೆದ್ದರು.

ಆರಂಭಿಕ ಐದು ಪಂದ್ಯಗಳನ್ನು ಸೋತಿದ್ದ ಮಂಧನಾ ತಂಡವು ನಂತರದ ಎರಡು ಪಂದ್ಯಗಳಲ್ಲಿ ಗೆಲುವು ಸವಿ ಅನುಭವಿಸಿತ್ತು. ಅತ್ತ ಮೊದಲ ಐದು ಪಂದ್ಯ ಗೆದ್ದಿದ್ದ ಮುಂಬೈ ಇಂಡಿಯನ್ಸ್ ತಂಡವು ನಂತರದ ಎರಡು ಪಂದ್ಯದಲ್ಲಿ ಸೋತಿದೆ. ಲೀಗ್ ಹಂತದಲ್ಲಿ ಉಭಯ ತಂಡಗಳಿಗೂ ಕೊನೆಯ ಪಂದ್ಯವಾಗಿದೆ. ಗೆಲುವಿನೊಂದಿಗೆ ಅಭಿಯಾನ ಅಂತ್ಯಗೊಳಿಸಲು ಆರ್ ಸಿಬಿ ಪ್ರಯತ್ನ ಪಟ್ಟರೆ, ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲು ಹರ್ಮನ್ ಪಡೆ ಸಜ್ಜಾಗಿದೆ.

ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧನಾ (ನಾ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಹೀದರ್ ನೈಟ್, ರಿಚಾ ಘೋಷ್ (ವಿ.ಕೀ), ಕನಿಕಾ ಅಹುಜಾ, ಶ್ರೇಯಾಂಕಾ ಪಾಟೀಲ್, ದಿಶಾ ಕಸಟ್, ಮೇಗನ್ ಶುಟ್, ಆಶಾ ಶೋಬನಾ, ಪ್ರೀತಿ ಬೋಸ್

Advertisement

ಮುಂಬೈ ಇಂಡಿಯನ್ಸ್: ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿ.ಕೀ), ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾ), ಅಮೆಲಿಯಾ ಕೆರ್, ಪೂಜಾ ವಸ್ತ್ರಾಕರ್, ಇಸ್ಸಿ ವಾಂಗ್, ಅಮಂಜೋತ್ ಕೌರ್, ಹುಮೈರಾ ಕಾಜಿ, ಜಿಂತಿಮನಿ ಕಲಿತಾ, ಸೈಕಾ ಇಶಾಕ್

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next