Advertisement

ಜಿಲ್ಲಾ ಉಸ್ತುವಾರಿ ಸಚಿವರ ಮರು ನೇಮಕ ರದ್ದು: ಆನಂದ್ ಸಿಂಗ್ ಕೊಪ್ಪಳಕ್ಕೇ !

07:32 PM Jul 30, 2022 | Team Udayavani |

ಬೆಂಗಳೂರು: ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಶಿಕಲಾ ಜೊಲ್ಲೆ ಅವರನ್ನು ಕೊಪ್ಪಳ ಜಿಲ್ಲೆಗೆ ನೇಮಕ ಮಾಡಿ ಶನಿವಾರ ಬೆಳಗ್ಗೆ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು ಆದರೆ ಸಂಜೆ ಆ ಆದೇಶವನ್ನು ರದ್ದು ಮಾಡಲಾಗಿದ್ದು ಈ ನಡೆ ಸರಕಾರವನ್ನು ಟೀಕೆಗೆ ಗುರಿಯಾಗುವಂತೆ ಮಾಡಿದೆ.

Advertisement

ಇದೇ ರೀತಿ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲೆಗೆ, ಗದಗ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ಶಶಿಕಲಾ ಜೊಲ್ಲೆ ಅವರನ್ನು ಕೊಪ್ಪಳ ಜಿಲ್ಲೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಇದೀಗ ಏಕಾಏಕಿ ಆದೇಶವನ್ನು ರದ್ದು ಮಾಡಲಾಗಿದ್ದು ಯಥಾಸ್ಥಿತಿಯಲ್ಲಿ ಉಸ್ತುವಾರಿ ಸಚಿವರಾಗಿ ಮುಂದುವರೆಯಲಿದ್ದಾರೆ ಎಂದು ಮರು ಆದೇಶದಲ್ಲಿ ಹೇಳಲಾಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದೆ.

ತವರು ಜಿಲ್ಲೆಯ ಉಸ್ತುವಾರಿ ನೀಡಬೇಕು ಎಂದು ಆನಂದ್ ಸಿಂಗ್ ಪಟ್ಟು ಹಿಡಿದಿದ್ದರು ಎಂದು ತಿಳಿದು ಬಂದಿತ್ತು, ಆದರೆ ಮತ್ತೆ ಮರು ಆದೇಶ ಹೊರಡಿಸಿರುವ ಕುರಿತು ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next