Advertisement
ಮಣಿಪುರ ಹಿಂಸಾಚಾರ ವಿಚಾರದ ಕುರಿತು ಸದನದಲ್ಲಿ ಚರ್ಚೆಗೆ ಸಿದ್ಧ, ಆದರೆ ಪ್ರತಿಪಕ್ಷಗಳು ಚರ್ಚೆಗೆ ಏಕೆ ಅವಕಾಶ ನೀಡುವುದಿಲ್ಲ ಎಂದು ನನಗೆ ತಿಳಿದಿಲ್ಲ. ಸೂಕ್ಷ್ಮ ವಿಷಯದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ನಾನು ವಿರೋಧ ಪಕ್ಷದ ನಾಯಕರನ್ನು ಒತ್ತಾಯಿಸುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.
Related Articles
Advertisement
ತುಷ್ಟೀಕರಣ vs ಸಂತುಷ್ಟೀಕರಣ
ಬಿಜೆಪಿ ತುಷ್ಟೀಕರಣ vs ಸಂತುಷ್ಟೀಕರಣ ಎಂದು ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಮಾತ್ರ ಮಾತನಾಡುತ್ತದೆ. ಅವರಿಗೆ ರಾಜಸ್ಥಾನ, ಬಂಗಾಳ ಮತ್ತು ಬಿಹಾರದ ಮಹಿಳೆಯರ ಬಗ್ಗೆ ಸಹಾನುಭೂತಿ ಇಲ್ಲ!. ಪ್ರಧಾನಿ ಮೋದಿಯವರು ದೇಶಾದ್ಯಂತ ಮಹಿಳೆಯರ ಸುರಕ್ಷತೆಯ ಬಗ್ಗೆ ಮಾತನಾಡುತ್ತಾರೆ. ಈ ಘಟನೆ ದೇಶದ ಯಾವುದೇ ರಾಜ್ಯದಲ್ಲಿರಬಹುದು. ಅವರು ಯಾರ ಮೇಲೂ ತಾರತಮ್ಯ ಮಾಡುವುದಿಲ್ಲ” ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದೆ.
”ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದರು- ‘ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕು! ಎಂದು, ಮೋದಿ ಸರ್ಕಾರವು ‘ಸಬ್ಕಾ ಸಾಥ್-ಸಬ್ಕಾ ವಿಕಾಸ್’ ಅನ್ನು ಮಂತ್ರ ಮಾಡುವ ಮೂಲಕ ಸಮಾಜದ ಪ್ರತಿಯೊಂದು ವರ್ಗವನ್ನು ಅಭಿವೃದ್ಧಿಪಡಿಸಿದೆ” ಎಂದು ಬಿಜೆಪಿ ಇನ್ನೊಂದು ಟ್ವೀಟ್ ಮಾಡಿದೆ.