Advertisement

ಕಾನೂನು ಹೋರಾಟಕ್ಕೆ ಸಿದ್ಧ

11:35 AM Nov 29, 2017 | Team Udayavani |

ಬೆಂಗಳೂರು: ತಮಿಳುನಾಡಿನ ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ನಟರಾಜನ್‌ಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಐಷಾರಾಮಿ ಜೀವನ ಕಲ್ಪಿಸಲು ಲಂಚದ ಬೇಡಿಕೆ ಆರೋಪ ಸಂಬಂಧ ಮಾನನಷ್ಠ ಮೊಕದ್ದಮೆ ದಾಖಲಿಸಿರುವ ಮಾಜಿ ಡಿಜಿ ಸತ್ಯನಾರಾಯಣರಾವ್‌ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ ಎಂದು ಡಿಐಜಿ ರೂಪಾ ತಿಳಿಸಿದ್ದಾರೆ.

Advertisement

ಜೈಲಿನಲ್ಲಿ ನಡೆಯುತ್ತಿರುವ ಅವ್ಯಹಾರ ಹಾಗೂ ಶಶಿಕಲಾ ನಟರಾಜನ್‌ಗೆ ವಿಶೇಷ ಸೌಲಭ್ಯಕ್ಕಾಗಿ 2 ಕೋಟಿ ರೂಗಳನ್ನು ಸತ್ಯನಾರಾಯಣರಾವ್‌ ಪಡೆದಿರುವ ಆರೋಪ ಸಂಬಂಧ ಅವರಿಗೇ ರೂಪಾ ವರದಿ ನೀಡಿದ್ದರು. ಈ ಹಿನ್ನೆಲೆಯಲ್ಲಿ 20 ಕೋಟಿ ರೂಪಾಯಿ ಪರಿಹಾರ ಕೋರಿ ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಸತ್ಯನಾರಾಯಣರಾವ್‌ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇದಕ್ಕೆ ಪ್ರತಿಯಿಸಿರುವ ರೂಪಾ, ಮಾನನಷ್ಟ ಪ್ರಕರಣ ಸಂಬಂಧ ನ್ಯಾಯಾಲಯದಿಂದ ಯಾವುದೇ ನೋಟಿಸ್‌ ಬಂದಿಲ್ಲ. ಮಾಧ್ಯಮಗಳ ಮೂಲಕ ವಿಚಾರ ತಿಳಿದು ಕೊಂಡಿದ್ದೇನೆ. ಒಂದು ವೇಳೆ ನೋಟಿಸ್‌ ಬಂದರೆ ಕೋರ್ಟ್‌ನಲ್ಲೇ ಸೂಕ್ತ ಉತ್ತರ ನೀಡುತ್ತೇನೆ ಎಂದರು. ಸರ್ಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ ಕುರಿತು ಆ ಇಲಾಖೆಯ ಅಧಿಕಾರಿಯಾಗಿ ನಾನು ತನಿಖೆ ನಡೆಸಿ ವರದಿ ನೀಡಿದ್ದೇನೆ.

ಹೀಗಾಗಿ ಇದು ಮಾನನಷ್ಠ ಮೊಕದ್ದಮೆ ವ್ಯಾಪ್ತಿಗೆ ಬರುವುದಿಲ್ಲ. ಜತೆಗೆ ಜೈಲು ಅಕ್ರಮಗಳ ಬಗ್ಗೆ ಸರ್ಕಾರ ರಚಿಸಿದ್ದ ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ ಕುಮಾರ್‌ ನೇತೃತ್ವದ ತಂಡ , ನೀಡಿದ ವರದಿ ಕೂಡ ನಾನು ಕೊಟ್ಟ ವರದಿಗೆ ಪೂರಕವಾಗಿದೆ ಎಂದು ತಿಳಿದು ಬಂದಿದೆ. ವಿನಯ್‌ ಕುಮಾರ್‌ ಅವರು ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಿಲ್ಲ. ಹೀಗಾಗಿ ಇದನ್ನು ಎಸಿಬಿ ತನಿಖೆ ನಡೆಸಬೇಕಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next