Advertisement

ಬೀದರ್‌ನಿಂದ ಸ್ಪರ್ಧೆಗೆ ಸಿದ್ಧ : ಈಶ್ವರ ಖಂಡ್ರೆ

01:45 AM Mar 09, 2019 | |

ಹುಬ್ಬಳ್ಳಿ: “ಬೀದರ್‌ ಲೋಕಸಭಾ ಕ್ಷೇತ್ರದ ಜನರು ಅಪೇಕ್ಷೆ ಪಟ್ಟರೆ ಹಾಗೂ ಪಕ್ಷದ ಹೈಕಮಾಂಡ್‌ ಸೂಚಿಸಿದರೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಾ.11ರಂದು ಸೀಟು ಹಂಚಿಕೆ ವಿಚಾರವಾಗಿ ದೆಹಲಿಯಲ್ಲಿ ಸ್ಕ್ರೀನಿಂಗ್‌ ಕಮಿಟಿಯ ಸಭೆ ಇದೆ. ಅಂದು ಟಿಕೆಟ್‌ ಹಂಚಿಕೆ ಬಹುತೇಕ ಅಂತಿಮವಾಗಲಿದೆ.

ಬೀದರ್‌, ಧಾರವಾಡ ಮತ್ತು ಹಾವೇರಿ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡುವ ವಿಚಾರವಾಗಿ ಈಗಾಗಲೇ ಎಲ್ಲಾ ಕ್ಷೇತ್ರದ ಆಕಾಂಕ್ಷಿಗಳ ಪಟ್ಟಿ ನಮ್ಮ ಬಳಿ ಇದೆ. ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಗೆಲ್ಲುವ ಅಭ್ಯರ್ಥಿಗಳ ಮಾನದಂಡ ಇಟ್ಟುಕೊಂಡು ಪಕ್ಷ ಟಿಕೆಟ್‌ ನೀಡುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next