Advertisement

BJP ಪಕ್ಷ ಟಿಕೆಟ್‌ ನೀಡಿದರೆ ಸ್ಪರ್ಧಿಸಲು ಸಿದ್ಧ: ಪ್ರಮೋದ್‌ ಮಧ್ವರಾಜ್‌

10:35 PM Jan 31, 2024 | Team Udayavani |

ಉಡುಪಿ: ಗುಜರಾತ್‌ನಿಂದ ಪಶ್ಚಿಮ ಬಂಗಾಲದ ವರೆಗೆ ಮೀನುಗಾರ ಸಮುದಾಯದ ಸಂಸದ ಇಲ್ಲ. ಬಿಜೆಪಿ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಿಕೊಡುತ್ತದೆ ಎಂಬ ವಿಶ್ವಾಸ ಇದೆ. ಪಕ್ಷ ಬಯಸಿದರೆ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧ. ಹಾಗೆಂದು ಪಕ್ಷ ಯಾರಿಗೆ ಟಿಕೆಟ್‌ ಕೊಟ್ಟರೂ ನಾನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

Advertisement

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ನಾನು ಅರ್ಹ ಎಂದು ಕಂಡರೆ ನನಗೆ ಟಿಕೆಟ್‌ ಸಿಗಲಿದೆ. ಬೇರೆಯವರು ಅರ್ಹರು ಇದ್ದರೆ ಅವರಿಗೆ ಕೊಡಬಹುದು. ಕಾರ್ಯಕರ್ತರು ಮತ್ತು ಜನರ ಅಭಿಪ್ರಾಯ ನನ್ನ ಕಡೆಗೆ ಇದೆ ಎಂಬ ಮಾಹಿತಿ ಇದೆ. ಎಲ್ಲರಿಗೂ ಟಿಕೆಟ್‌ಗಾಗಿ ಪ್ರಯತ್ನಿಸುವ ಹಕ್ಕಿದೆ. ನಾನು 6 ತಿಂಗಳಿಂದ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದೇನೆ. 24 ಜಿಲ್ಲೆಯಲ್ಲಿ ಮೀನುಗಾರ ಮುಖಂಡರ ಸಭೆ ನಡೆಸಲಾಗಿದೆ.

ಉಡುಪಿ – ಚಿಕ್ಕಮಗಳೂರಿನಲ್ಲಿ 6 ಸಾವಿರ ಬಿಜೆಪಿಯ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿದ್ದೇನೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next