Advertisement

ಕಮಲಕ್ಕೇ ಆಪರೇಷನ್‌ ಮಾಡಲು ಸಿದ್ಧ: ಸುರೇಶ್‌

06:40 AM Sep 18, 2018 | Team Udayavani |

ಬೆಂಗಳೂರು: ಸರ್ಕಾರ ಉರುಳಿಸಲು ಬಿಜೆಪಿಯವರು ಆಪರೇಷನ್‌ ಕಮಲಕ್ಕೆ ಮುಂದಾದರೆ ನಾವು ಕಮಲಕ್ಕೇ ಆಪರೇಷನ್‌ ಮಾಡಿ ಬಿಜೆಪಿ ಶಾಸಕರನ್ನು ಸೆಳೆಯುವುದು ನಿಶ್ಚಿತ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿ ಕಡಿಮೆ ಸ್ಥಾನ ಹೊಂದಿ ಅಧಿಕಾರದಲ್ಲಿದ್ದರೂ ನಾವು ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡಿಲ್ಲ. ಆದರೆ, ರಾಜ್ಯದಲ್ಲಿ ಬಿಜೆಪಿ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಮುಂದಾಗಿದ್ದು, ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬಂತೆ ನಾವು ಸರ್ಕಾರ ಉಳಿಸಿಕೊಳ್ಳಲು ಅವರ ದಾರಿಯನ್ನೇ ಅನುಸರಿಸಬೇಕಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next