Advertisement

ಐತಿಹಾಸಿಕ ಪಾತ್ರದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ

11:33 AM Nov 30, 2020 | Suhan S |

ಸ್ಯಾಂಡಲ್‌ವುಡ್‌ನ‌ ಸಕ್ಸಸ್‌ಫ‌ುಲ್‌ ಕಾಂಬಿನೇಶನ್‌ ಪೈಕಿ ನಟ ರಿಯಲ್‌ ಸ್ಟಾರ್‌ ಉಪೇಂದ್ರ ಮತ್ತು ನಿರ್ದೇಶಕ ನಾಗಣ್ಣ ಅವರ ಕಾಂಬಿನೇಶನ್‌ ಕೂಡ ಒಂದು. ಈಗಾಗಲೇ “ಕುಟುಂಬ’, “ಗೌರಮ್ಮ’, “ದುಬೈ ಬಾಬು’, “ಗೋಕರ್ಣ’ ಸೇರಿದಂತೆ ನಾಲ್ಕು ಹಿಟ್‌ ಚಿತ್ರಗಳನ್ನು ನೀಡಿರುವ ರಿಯಲ್‌ ಸ್ಟಾರ್‌ ಉಪೇಂದ್ರ ಮತ್ತು ನಿರ್ದೇಶಕ ನಾಗಣ್ಣ ಜೋಡಿ ಈಗ ಐದನೇ ಚಿತ್ರಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ.

Advertisement

ಈಗಾಗಲೇ ಈ ಚಿತ್ರದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದ್ದು, ಎಲ್ಲ ಅಂದುಕೊಂಡಂತೆ ನಡೆದರೆ, ಹೊಸ ವರ್ಷದ ಆರಂಭದಲ್ಲಿ ಈ ಚಿತ್ರ ಸೆಟ್ಟೇರಲಿದೆ. ಇನ್ನು ತಮ್ಮ ಮತ್ತು ಉಪೇಂದ್ರ ಅವರ ಕಾಂಬಿನೇಶನ್‌ನ ಹೊಸ  ಚಿತ್ರದ ಬಗ್ಗೆ “ಉದಯವಾಣಿ’ ಜೊತೆ ಮಾತನಾಡಿದ ನಿರ್ದೇಶಕ ನಾಗಣ್ಣ, “ಇದೊಂದು ಐತಿಹಾಸಿಕ ಕಥಾಹಂದರ ಹೊಂದಿರುವ ಸಿನಿಮಾ.

15ನೇ ಶತಮಾನದ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ತೆರೆಮೇಲೆ ತರುತ್ತಿದ್ದೇವೆ. ಭಾರವಿ ಅವರಕಥೆ ಇದಾಗಿದೆ. ಕಥೆಯನ್ನುಕೇಳಿದ ಉಪೇಂದ್ರ ಖುಷಿಯಿಂದ ಈ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ. ಮೊದಲ ಬಾರಿಗೆ ಉಪೇಂದ್ರ ಈ ಸಿನಿಮಾದಲ್ಲಿ ಐತಿಹಾಸಿಕ ಪಾತ್ರವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು ಮತ್ತು ಹಿಂದಿ ಸೇರಿದಂತೆ ಸದ್ಯಕ್ಕೆ ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಮಾಡಲು ಯೋಚಿಸಿದ್ದೇವೆ. ಸಿನಿಮಾದ ಟೈಟಲ್‌ ಇನ್ನಷ್ಟೇ ಅಂತಿಮವಾಗಬೇಕಿದೆ’ ಎನ್ನುತ್ತಾರೆ. “ಕನ್ನಡದ ಜೊತೆಗೆ ಬೇರೆ ಭಾಷೆಯ ಕಲಾವಿದರು

ಕೂಡ ಈ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ಸಿನಿಮಾದ ಹೀರೋಯಿನ್ಸ್‌ ಮತ್ತಿತರಕಲಾವಿದರ ಆಯ್ಕೆ ನಡೆಯುತ್ತಿದೆ. ಈ ಸಿನಿಮಾದ ಹಾಡುಗಳಿಗೆ ಹಂಸಲೇಖ ಸಂಗೀತಸಂಯೋಜಿಸುತ್ತಿದ್ದಾರೆ. ಈಗಾಗಲೇ ಹಾಡುಗಳಸಂಯೋಜನೆಕೂಡ ಶುರುವಾಗಿದೆ. ಚಿತ್ರಕ್ಕೆ ಸುರೇಶ್‌ ಅರಸ್‌ ಸಂಕಲನವಿದೆ. ಉಳಿದಂತೆ ಇತರ ತಂತ್ರಜ್ಞರ ಆಯ್ಕೆ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ ನಿರ್ದೇಶಕ ನಾಗಣ್ಣ.

ಇನ್ನು ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಇಬ್ಬರು ನಾಯಕಿಯರು ಜೋಡಿಯಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರಂತೆ. ಏಕಕಾಲಕ್ಕೆ ನಾಲ್ಕು ಭಾಷೆಗಳಲ್ಲಿ ಈ ಚಿತ್ರ ಬರುತ್ತಿರುವುದರಿಂದ, ಇಬ್ಬರು ನಾಯಕಿಯರ ಪಾತ್ರಕ್ಕೆ ಈಗಾಗಲೇ, ಹಿಂದಿ ಮತ್ತು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಸ್ಟಾರ್‌ ನಟಿಯರನ್ನೇ ಚಿತ್ರಕ್ಕೆ ಕರೆತರುವ ಯೋಚನೆಯಿದೆ ಎನ್ನಲಾಗುತ್ತಿದೆ. ಈ ಹಿಂದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ್ದ “ಎ’ ಚಿತ್ರವನ್ನು ನಿರ್ಮಿಸಿದ್ದ ಜಗನ್ನಾಥ್‌ ಅವರ ಬ್ಯಾನರ್‌ನಲ್ಲಿ ಈ ಚಿತ್ರ ಮೂಡಿಬರುತ್ತಿದೆ.

Advertisement

“ಈಗಾಗಲೇ ಈ ಸಿನಿಮಾದ ಪ್ರೀ-ಪ್ರೊಡಕ್ಷನ್‌ ಕೆಲಸಗಳು ಶುರುವಾಗಿದೆ. ಮುಂಬರುವ ಜನವರಿ ಅಥವಾ ಫೆಬ್ರವರಿಯಲ್ಲಿ ಸಿನಿಮಾದ ಮುಹೂರ್ತ ನಡೆಯಲಿದೆ. ಒಂದೇ ಹಂತದಲ್ಲಿ ಶೂಟಿಂಗ್‌ ಮುಗಿಸುವ ಯೋಚನೆ ಇದೆ. ಇಲ್ಲಿಯವರೆಗೆ ನೋಡಿರದ ಹೊಸ ಗೆಟಪ್‌ನಲ್ಲಿ ಉಪೇಂದ್ರ ಅವರನ್ನು ಈ ಸಿನಿಮಾದಲ್ಲಿ ನೋಡಬಹುದು. ಅವರ ಅಭಿಮಾನಿಗಳಿಗೆ ಖಂಡಿತ ಇಷ್ಟವಾಗುವ ಸಿನಿಮಾವಾಗಲಿದೆ’ ಎನ್ನುತ್ತಾರೆ ನಿರ್ದೇಶಕ ನಾಗಣ್ಣ.

“ಕಬ್ಜ’ ಚಿತ್ರೀಕರಣ ಪೂರ್ಣವಾಗುತ್ತಿದ್ದಂತೆ, ಉಪ್ಪಿ – ನಾಗಣ್ಣಕಾಂಬಿನೇಶನ್‌ನ ಈ ಹೊಸಚಿತ್ರ ಶುರುವಾಗಲಿದೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next