Advertisement

ಬಂಡಾಯ ಶಾಸಕರು ಕಾಂಗ್ರೆಸ್‌ಗೆ

06:00 AM Mar 28, 2018 | Team Udayavani |

ಬೆಂಗಳೂರು: ವಿಧಾನಸಭೆ ಚುನಾವಣೆ ಪರೀಕ್ಷೆ ಎದುರಿಸಲು ಕಾಂಗ್ರೆಸ್‌ ಸಿದ್ದವಾಗಿದ್ದು, ಪರೀಕ್ಷೆಯಲ್ಲಿ ಕಾಂಗ್ರೆಸ್‌ ಡಿಸ್ಟಿಂಗನ್‌ನಲ್ಲಿ ತೇರ್ಗಡೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಜೆಡಿಎಸ್‌ನಲ್ಲಿ ಬಂಡಾಯವೆದ್ದು ಪಕ್ಷದಿಂದ ಅಮಾನತ್ತಾಗಿದ್ದ ಆರು ಜನ ಮಾಜಿ ಶಾಸಕರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಪಡೆದುಕೊಂಡರು. ಗಂಗಾವತಿ ಮಾಜಿ ಶಾಸಕ ಇಕ್ಬಾಲ್‌ ಅನ್ಸಾರಿ ಆಗಮಿಸಿರಲಿಲ್ಲ. ವಿಧಾನ ಪರಿಷತ್‌ ಮಾಜಿ
ಸದಸ್ಯ ರಾಮಕೃಷ್ಣ ಕೂಡ ಇದೇ ವೇಳೆ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಗುಂಡೂರಾವ್‌, ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ವರದಿಗಳನ್ನು ತಿರಸ್ಕರಿಸಿದರು. ಆದರೆ, ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ಸರ್ವೋದಯ ಪಕ್ಷದ ಜತೆಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ. ಉಳಿದಂತೆ ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ ಎಂದು
ಹೇಳಿದರು. 

ಜೆಡಿಎಸ್‌ನಲ್ಲಿ ಬಂಡಾಯವೆದ್ದು ಪಕ್ಷದಿಂದ ಅಮಾನತ್ತಾಗಿದ್ದ ಆರು ಜನ ಮಾಜಿ ಶಾಸಕರು ಮಂಗಳವಾರ ಅಧಿಕೃತವಾಗಿ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಪಡೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next