Advertisement

ಅಂಬಿ ಅಗಲಿಕೆಗೆ ಮಂಕಾದ ಮಂಡ್ಯ ಕಾಂಗ್ರೆಸ್‌

06:00 AM Nov 26, 2018 | Team Udayavani |

ಬೆಂಗಳೂರು: ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಅಕಾಲಿಕ ನಿಧನ ರಾಜ್ಯ ಕಾಂಗ್ರೆಸ್‌ಗೆ ಹಿನ್ನಡೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಸಾಕಷ್ಟು ಹಿನ್ನಡೆಗೆ ಕಾರಣವಾಗುವ ಸಾಧ್ಯತೆಯಿದೆ.

Advertisement

ಚಿತ್ರರಂಗದ ಹಾಗೆಯೇ ರಾಜಕೀಯದಲ್ಲೂ ಉನ್ನತ ಹುದ್ದೆಗೇರಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದ ಅಂಬರೀಶ್‌, ಇತ್ತೀಚಿನ ರಾಜಕೀಯದಲ್ಲಿನ ಬೆಳವಣಿಗೆಗಳಿಂದ ಬೇಸರಗೊಂಡು ತಟಸ್ಥರಾಗಿ ಉಳಿದಿದ್ದರು. ಆದರೆ, ರಾಜಕಾರಣದಲ್ಲಿ ಅವರ ತಾರಾ ವರ್ಚಸ್ಸು ಸಾಕಷ್ಟು ಕೆಲಸ ಮಾಡುತ್ತಿತ್ತು. ಅದರ ಪರಿಣಾಮ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ದೊರೆತ ಫ‌ಲಿತಾಂಶವೇ ಸಾಕ್ಷಿಯಾಗಿದೆ. 

ಹಳೇ ಮೈಸೂರು ಭಾಗದಲ್ಲಿ ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಅಂಬರೀಶ್‌ ಪ್ರಭಾವ ಅರಿತಿದ್ದ ಕಾಂಗ್ರೆಸ್‌ ನಾಯಕರು ಕೊನೆಯ ಘಳಿಗೆವರೆಗೂ ಅಂಬರೀಶ್‌ ಹೆಸರಿನಲ್ಲೇ ಮಂಡ್ಯ ವಿಧಾನಸಭಾ ಟಿಕೆಟ್‌ ಮೀಸಲಿಟ್ಟಿದ್ದರು. ಆದರೆ, ಇದನ್ನು ಅಂಬರೀಶ್‌ ತಿರಸ್ಕರಿಸುವ ಮೂಲಕ ಮಂಡ್ಯದಲ್ಲಿ ಕಾಂಗ್ರೆಸ್‌ ವಿರುದ್ಧ ತಮ್ಮ ಸಿಟ್ಟು ಹೊರ ಹಾಕಿದ್ದರು.

ಮಂಕಾದ ಮಂಡ್ಯ ಕಾಂಗ್ರೆಸ್‌:
ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಹಾಗೂ ಮಾಜಿ ಸಂಸದ ಜಿ. ಮಾದೇಗೌಡ ನಂತರ ಮಂಡ್ಯ ಕಾಂಗ್ರೆಸ್‌ನಲ್ಲಿ ಅಂಬರೀಶ್‌ ತಮ್ಮದೇ ಆದ ವರ್ಚಸ್ಸು ಬೆಳೆಸಿಕೊಂಡಿದ್ದರು. ಜನತಾದಳದಿಂದ ಕಾಂಗ್ರೆಸ್‌ ಸೇರ್ಪಡೆಯಾಗಿದ್ದರೂ ಎಸ್‌.ಎಂ. ಕೃಷ್ಣ ಅವರ ವಿರುದ್ಧ ದಿಕ್ಕಿನಲ್ಲಿ ರಾಜಕಾರಣ ಮಾಡಿ, ಜಿಲ್ಲೆಯನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈಗ ಅಂಬರೀಶ್‌ ಅವರ ಅಕಾಲಿಕ ನಿಧನದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಪಕ್ಷವನ್ನು ಮುನ್ನಡೆಸುವಂತಹ ನಾಯಕರ ಕೊರತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next