Advertisement

ಇಂದು ರೆಬೆಲ್‌ಸ್ಟಾರ್‌ ಅಂಬರೀಶ್‌ ಸ್ಮಾರಕ ಲೋಕಾರ್ಪಣೆ

09:50 PM Mar 26, 2023 | Team Udayavani |

ಬೆಂಗಳೂರು: ರೆಬೆಲ್‌ಸ್ಟಾರ್‌ ಅಂಬರೀಶ್‌ ಅವರ ಸ್ಮಾರಕ ಸೋಮವಾರ ಲೋಕಾರ್ಪಣೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಈ ಸ್ಮಾರಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.

Advertisement

ಕಂಠೀರವ ಸ್ಟುಡಿಯೋದಲ್ಲಿ 1 ಎಕರೆ 34 ಗುಂಟೆ ಜಾಗದಲ್ಲಿ ಸುಮಾರು 12 ಕೋಟಿ ರೂ. ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗಿದೆ. ವಿಭಿನ್ನ ಶೈಲಿಯಲ್ಲಿ ನಿರ್ಮಿಸಲಾದ ಈ ಸ್ಮಾರಕದಲ್ಲಿ  ಕೈ ಮುಗಿಯುವ ಆಕಾರದಲ್ಲಿ ನಿರ್ಮಾಣ ಮಾಡಲಾಗಿರುವ ಗೋಪುರ ಸ್ಮಾರಕದ ಆಕರ್ಷಣೆಯಾಗಿದೆ.

ಜತೆಗೆ 32 ಅಡಿ ಎತ್ತರದ ಅಂಬರೀಶ್‌ ಅವರ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದಲ್ಲದೇ, ಮ್ಯೂಸಿಯಂ ಕೂಡಾ ಸಿದ್ಧವಾಗುತ್ತಿದೆ. ರಾತ್ರಿ ಹೊತ್ತಲ್ಲಿ ಸ್ಮಾರಕ ಕಂಗೊಳಿಸುವಂತೆ 100ಕ್ಕೂ ಹೆಚ್ಚು ಎಲ್‌ಇಡಿ ಲೈಟ್‌ಗಳನ್ನು ಅಳವಡಿಸಲಾಗಿದೆ.

ಈ ಮೂಲಕ ಅಂಬರೀಶ್‌ ಅವರ ನೆನಪನ್ನು ಚಿರಸ್ಥಾಯಿಯಾಗಲಿದೆ. ಇದಲ್ಲದೇ ನಗರದ ರೇಸ್‌ಕೋರ್ಸ್‌ ರಸ್ತೆಗೆ ರೆಬೆಲ್‌ಸ್ಟಾರ್‌ಎಂ ಎಚ್‌. ಅಂಬರೀಶ್‌ ರಸ್ತೆ ಎಂದು ಸಿಎಂ ಬೊಮ್ಮಾಯಿ ನಾಮಕರಣ ಮಾಡಿ ಅನಾವರಣ ಕೂಡ ಮಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next