Advertisement

ಅನಾಥ ಮಕ್ಕಳಿಗೆ ಪ್ರವರ್ಗ-1 ಮೀಸಲಾತಿಗೆ ಶಿಫಾರಸು

09:34 PM Mar 15, 2023 | Team Udayavani |

ಬೆಂಗಳೂರು: ಜಾತಿ ಗೊತ್ತಿಲ್ಲದ ಅನಾಥ ಮಕ್ಕಳಿಗೆ ಪ್ರವರ್ಗ-1ರಡಿ ಮೀಸಲಾತಿ ಕಲ್ಪಿಸಿಕೊಡಲು ನಿರ್ಧರಿಸಿ ವಿಶೇಷ ವರದಿಯನ್ನು ಸಿದ್ಧಪಡಿಸಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸರ್ಕಾರಕ್ಕೆ ಸಲ್ಲಿಸಿದೆ.

Advertisement

ತಂದೆ-ತಾಯಿ ಇಲ್ಲದ ಹಾಗೂ ಜಾತಿ ಗೊತ್ತಿರದ ಅನಾಥ ಮಕ್ಕಳಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ಕಲ್ಪಿಸಿಕೊಡಲು ಸರಕಾರಕ್ಕೆ ಈ ಶಿಫಾರಸು ಮಾಡಲಾಗಿದೆ. ಅನಾಥ ಮಕ್ಕಳಿಗೆ ತೆಲಂಗಾಣ, ಮಹಾರಾಷ್ಟ್ರದಲ್ಲಿ ಮೀಸಲಾತಿ ಕಲ್ಪಿಸಿರುವ ಮಾದರಿಯಲ್ಲಿ ನಮ್ಮಲ್ಲೂ ಮೀಸಲಾತಿ ಒದಗಿಸುವ ದೃಷ್ಟಿಯಿಂದ ವಿವಿಧ ಜಿಲ್ಲೆ ಗಳಲ್ಲಿರುವ ಅನಾಥಾಲಯಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಾಗಿದ್ದು, ಈ ಎಲ್ಲಾ ಮಾಹಿತಿಯನ್ನಾದರಿಸಿ, ಜಾತಿ ತಿಳಿದಿರುವ ಮಕ್ಕಳಿಗೆ ಆಯಾ ಜಾತಿಯ ಪ್ರವರ್ಗದಡಿ ಮತ್ತು ಜಾತಿ ಗೊತ್ತಿಲ್ಲದ ಅನಾಥ ಮಕ್ಕಳಿಗೆ ಪ್ರವರ್ಗ-1 ರಡಿಯಲ್ಲಿ ಮೀಸಲಾತಿ ಕಲ್ಪಿಸಲು ಕೋರಲಾಗಿದೆ ಎಂದು ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ತಿಳಿಸಿದರು.

ಇನ್ನು ಈಗಿರುವ ಮೀಸಲಾತಿ ಪಟ್ಟಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಿ, ಕಾಗುಣಿತ, ಉಚ್ಛಾರ ಮತ್ತಿತರ ಲೋಪದೋಷಗಳಿದ್ದರೆ ಸರಿಪಡಿಸಿ ಪ್ರತಿ ಪಂಚಾಯ್ತಿಗೂ ಕಳುಹಿಸಲು ಆಯೋಗ ತೀರ್ಮಾನಿಸಿದೆ. ಇದರಿಂದ ಆಯಾ ಸ್ಥಳೀಯ ಮಟ್ಟದಲ್ಲಿ ತಮ್ಮ ಸಮುದಾಯಗಳಿಗಿರುವ ಮೀಸಲಾತಿ ಬಗ್ಗೆ ತಿಳಿಯಲಿದೆ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next