Advertisement

ದಿಲ್ಲಿಯಲ್ಲಿ ಕರ್ನಾಟಕ ಭವನ -1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಬಿಎಸ್ ವೈ ಚಾಲನೆ

01:51 PM Sep 18, 2020 | keerthan |

ಹೊಸದಿಲ್ಲಿ: ದಿಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಕರ್ನಾಟಕ ಭವನ -1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

Advertisement

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ವತಿಯಿಂದ ದೆಹಲಿಯ ಕರ್ನಾಟಕ ಭವನ -1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ‌ಮುಖ್ಯಮಂತ್ರಿಗಳು ಕಾಮಗಾರಿಗೆ ಚಾಲನೆ ನೀಡಿದರು.

ಈ ಕಾಮಗಾರಿಯು 87 ಕೋಟಿ ರೂ. ವೆಚ್ಚದಾಗಿದ್ದು ರಾಜ್ಯದಿಂದ ಬರುವ ಗಣ್ಯ ವ್ಯಕ್ತಿಗಳ ವಾಸ್ತವ್ಯಕ್ಕಾಗಿ ನಿರ್ಮಾಣ ಮಾಡಲಾಗುತ್ತಿದೆ.

ಇದನ್ನೂ ಓದಿ: ಉದಯವಾಣಿ ಅಭಿಯಾನದ ಫ‌ಲಶ್ರುತಿ; ಕರಾವಳಿಗರಿಗೆ ಸಂದ ಜಯ; ಪಿಸಿಐಟಿ ಕಚೇರಿ ಎತ್ತಂಗಡಿ ಇಲ್ಲ

ಈ ಸಮಯದಲ್ಲಿ ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮುಂತಾದವರು ಉಪಸ್ಥಿತರಿದ್ದರು.

Advertisement

ಸಿಎಂ ಬಿಎಸ್ ವೈ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next