Advertisement

Muda Scam: ಮುಡಾ ದಾಖಲೆ ಸುಟ್ಟ ಸಚಿವ ಬೈರತಿ; ಶೋಭಾ ಕರಂದ್ಲಾಜೆ

08:50 PM Oct 19, 2024 | Team Udayavani |

ಬೆಂಗಳೂರು: ಮುಡಾ ಹಗರಣದ ದಾಖಲೆಗಳನ್ನು ಕಾರಿನಲ್ಲಿ ತಂದು ಸಚಿವ ಬೈರತಿ ಸುರೇಶ್‌ ಸುಟ್ಟುಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಭೈರತಿ ಸುರೇಶ್‌ ಅವರನ್ನು ಬಂಧಿಸಿ ವಿಚಾರಣೆಗೊಳಿಪಡಿಸಿದರೆ ಎಲ್ಲವೂ ಹೊರಗೆ ಬರುತ್ತದೆ ಎಂದು ಆಗ್ರಹಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, 2ನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದೇ ಹಣ ಮಾಡುವುದಕ್ಕಾಗಿ ಎಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾದಲ್ಲಿ ನಡೆದ ಅವ್ಯವಹಾರ ಇದಕ್ಕೆ ಸಾಕ್ಷಿ. ಮುಡಾದಲ್ಲಿ ಎಲ್ಲ ಕಾನೂನುಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಕೋರ್ಟ್‌ ಕೂಡ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

ನಿವೇಶನ ವಾಪಸ್‌ ಮಾಡುವ ಮೂಲಕ ಸಿದ್ದರಾಮಯ್ಯ ತಪ್ಪು ಮಾಡಿದ್ದೇನೆ ಎಂದು ಸಾಬೀತು ಮಾಡಿದ್ದಾರೆ. ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಅನ್ವಯ ಇ.ಡಿ.ಯವರು ತನಿಖೆ ಮಾಡುತ್ತಿದ್ದಾರೆ. ಮುಡಾ ಸಂಬಂಧಿಸಿದ ದಾಖಲೆಗಳನ್ನು ಹೆಲಿಕಾಪ್ಟರ್‌ನಲ್ಲಿ ತೆಗೆದುಕೊಂಡು ಹೋದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ತಂದರೂ ಕೊನೆಗೆ ಕಾರಿನಲ್ಲೇ ತರಬೇಕಲ್ಲ ಎಂದು ವ್ಯಂಗ್ಯವಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next