Advertisement

ಸರ್ಕಾರದ ಆದಾಯದಲ್ಲಿ ದಾಖಲೆ ಪ್ರಮಾಣದ ಏರಿಕೆ: ಸಚಿವ ಆರ್‌.ಅಶೋಕ್‌

08:29 PM Sep 05, 2022 | Team Udayavani |

ಬೆಂಗಳೂರು: ಆಸ್ತಿ ನೋಂದಣಿಗೆ ಶೇ.10 ರಿಯಾಯಿತಿ ನೀಡಿದ ಪರಿಣಾಮ ಸರ್ಕಾರದ ಆದಾಯ ಹೆಚ್ಚಿದ್ದು, ಕಳೆದ ಮೂರು ತಿಂಗಳಲ್ಲಿ 6700 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ ಈ ಅವಧಿಯಲ್ಲಿ 1900 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹವಾಗಿದ್ದು, ಇತಿಹಾಸದಲ್ಲೇ ಇದು ದಾಖಲೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

Advertisement

ನೋಂದಣಿ ಹಾಗೂ ಮುದ್ರಾಂಕ ಶುಲ್ಕ ರಿಯಾಯಿತಿ ನೀಡಿದ್ದರಿಂದ ಸರ್ಕಾರದ ಆದಾಯದಲ್ಲಿ ದಾಖಲೆ ಪ್ರಮಾಣದ ಏರಿಕೆಯಾಗಿದೆ. ಇದನ್ನು ಇನ್ನೂ 3 ತಿಂಗಳು ವಿಸ್ತರಿಸಿ ಸದ್ಯದಲ್ಲಿ ಆದೇಶ ಮಾಡಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ರೈತರು ಒತ್ತುವರಿ ಮಾಡಿರುವ ಒಂದು ಲಕ್ಷ ಎಕರೆಗೂ ಹೆಚ್ಚಿನ ಭೂಮಿಯನ್ನು ಅವರಿಗೇ ಗುತ್ತಿಗೆ ಆಧಾರದ ಮೇಲೆ ನೀಡುವ ಸಂಬಂಧ ತಿದ್ದುಪಡಿ ಮಸೂದೆ ಸಿದ್ಧಪಡಿಸಲಾಗಿದ್ದು ಈ ಬಾರಿಯ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.

ಇದೇ ರೀತಿ ಭೂ ಪರಿವರ್ತನೆ ಕಾರ್ಯವನ್ನು ಮತ್ತಷ್ಟು ಸರಳಗೊಳಿಸುವ ಉದ್ದೇಶದ ತಿದ್ದುಪಡಿ ಮಸೂದೆಯನ್ನು ಸಿದ್ಧಪಡಿಸಲಾಗಿದ್ದು ಅದನ್ನೂ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದರು.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next