Advertisement

Tourism: ಪ್ರವಾಸೋದ್ಯಮ ಅಧಿಕಾರಿಗಳ ನೇಮಕ?

09:29 PM Sep 26, 2023 | Team Udayavani |

ನವದೆಹಲಿ: ಭಾರತದ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಎಲ್ಲಾ ರಾಯಭಾರಿ ಕಚೇರಿಗಳು ಹಾಗೂ ದೂತವಾಸ ಕಚೇರಿಗಳಲ್ಲಿ ಪ್ರವಾಸೋದ್ಯಮ ಅಧಿಕಾರಿಗಳನ್ನು ನೇಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ. 2 ವರ್ಷಗಳ ಹಿಂದೆ, ವಿದೇಶಗಳಲ್ಲಿದ್ದ ಪ್ರವಾಸೋದ್ಯಮ ಕಚೇರಿಗಳನ್ನು ಕೇಂದ್ರ ಸರ್ಕಾರ ಮುಚ್ಚಿತು.

Advertisement

ಇದರ ಬದಲಾಗಿ ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲು, 20 ದೇಶಗಳಲ್ಲಿ ಪ್ರವಾಸೋದ್ಯಮ ಅಧಿಕಾರಿಗಳನ್ನು ನೇಮಿಸಿತು. ಕೆಲವು ದಿನಗಳ ಹಿಂದೆ ನಡೆದ ಸಂಸತ್‌ನ ವಿಶೇಷ ಅಧಿವೇಶನದ ಸಂದರ್ಭದಲ್ಲಿ, ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಸಂಸದೀಯ ಸ್ಥಾಯಿ ಸಮಿತಿಯು, ವಿದೇಶಗಳಲ್ಲಿದ್ದ ಪ್ರವಾಸೋದ್ಯಮ ಕಚೇರಿಗಳನ್ನು ಮುಚ್ಚಿರುವುದು ಭಾರತದ ಪ್ರವಾಸೋದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂಬುದನ್ನು ಗಮನಿಸಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ನೇಮಕಕ್ಕೆ ಸರ್ಕಾರ ಮುಂದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next