Advertisement

ದ.ಕ.ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

11:36 PM Aug 11, 2019 | Lakshmi GovindaRaj |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಮುನ್ನೆಚ್ಚರಿಕೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಗ್ನಿಶಾಮಕ ದಳ ಕಾರ್ಯಪ್ರವೃತ್ತವಾಗಿದೆ. 5 ಕೋಸ್ಟ್‌ಗಾರ್ಡ್‌ ತಂಡ ಸನ್ನದ್ಧವಾಗಿದೆ.

Advertisement

ಜಿಲ್ಲೆಯ ಪ್ರತಿ ತಾಲೂಕಿನಲ್ಲೂ 2 ಹೋಮ್‌ಗಾರ್ಡ್‌ ತಂಡಗಳು ಸಿದ್ಧವಾಗಿವೆ. ಈಗಾಗಲೇ ಎನ್‌ಡಿಆರ್‌ಎಫ್‌ ತಂಡವನ್ನು ಸಜ್ಜುಗೊಳಿಸಲಾಗಿದ್ದು, ಬಂಟ್ವಾಳದಲ್ಲಿ 13 ಜನರ ತಂಡ, ಬೆಳ್ತಂಗಡಿಯ ಚಾರ್ಮಾಡಿಯಲ್ಲಿ 13 ಮತ್ತು 30 ಮಂದಿಯ ತಂಡ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next