Advertisement

ದತ್ತ ಮಹಾರಾಜರಿಗೆ ರೆಡ್ಡಿ ವಿಶೇಷ ಪೂಜೆ

12:58 AM May 27, 2019 | Team Udayavani |

ಅಫಜಲಪುರ: ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ಜನ ಜಾನುವಾರುಗಳು ತತ್ತರಿಸಿವೆ. ಹೀಗಾಗಿ, ಈ ಬಾರಿ ಉತ್ತಮ ಮಳೆ, ಬೆಳೆಯಾಗಿ ರೈತರಿಗೆ ಅನುಕೂಲವಾಗಲಿ. ಎಲ್ಲವೂ ಸಮೃದ್ಧವಾಗಿ ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳು ದೂರವಾಗಲಿ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ದತ್ತಾತ್ರೇಯ ಮಹಾರಾಜರಿಗೆ ವಿಶೇಷ ಪೂಜೆ ನೆರವೇರಿಸಿದರು.

Advertisement

ತಾಲೂಕಿನ ದೇವಲಗಾಣಗಾಪುರಕ್ಕೆ ಭೇಟಿ ನೀಡಿ ದತ್ತ ಮಹಾರಾಜರಿಗೆ ಪೂಜೆ ನೆರವೇರಿಸಿ ಮಾತನಾಡಿದ ಅವರು, ಸುಮಾರು ಹತ್ತು ವರ್ಷಗಳ ಹಿಂದೆ ಇಲ್ಲಿಗೆ ಭೇಟಿ ನೀಡಬೇಕೆಂದು ಹರಕೆ ಕಟ್ಟಿಕೊಂಡಿದ್ದೆ. ಆದರೆ, ಅನೇಕ ಕಾರಣಗಳಿಂದಾಗಿ ಇಲ್ಲಿಗೆ ಬರಲಾಗಿರಲಿಲ್ಲ. ಈಗ ದತ್ತಾ ತ್ರೇಯ ಮಹಾರಾಜರು ನನ್ನನ್ನು ಕರೆಸಿಕೊಂಡಿದ್ದಾರೆ. ಹೀಗಾಗಿ, ಗಾಣಗಾಪುರಕ್ಕೆ ಬಂದು ಪೂಜೆ ನೆರವೇರಿಸಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next