Advertisement

ರೆಡ್ಡಿ ಅಸಮಾಧಾನ ಹೈಕಮಾಂಡ್‌ ಗಮನಕ್ಕೆ ತರುವೆ: ಸಚಿವ ಶ್ರೀರಾಮುಲು

09:24 PM Nov 01, 2022 | Team Udayavani |

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಬಗ್ಗೆ ಹೊರಹಾಕಿರುವ ಅಸಮಾಧಾನ ಕುರಿತು ಬಿಜೆಪಿ ಹೈಕಮಾಂಡ್‌ ಜತೆ ಮಾತುಕತೆ ನಡೆಸುವೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಪಷ್ಟಪಡಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಆದರೆ, ಕೆಲ ಕಾರಣಗಳಿಂದ ಅವರು ಸಕ್ರಿಯ ರಾಜಕಾರಣದಲ್ಲಿ ಇರಬೇಕು ಎಂಬುದು ನಮ್ಮ ಆಶಯ.

ಜನಾರ್ದನ ರೆಡ್ಡಿ ಅವರಲ್ಲಿರುವ ಅಸಮಾಧಾನ ಕುರಿತು ಆವರೊಂದಿಗೆ ಮಾತುಕತೆ ನಡೆಸುತ್ತೇನೆ. ಯಾವ ಕಾರಣಕ್ಕೆ ಹೇಳಿಕೆ ನೀಡಿದ್ದಾರೆ ಅನ್ನೋದು ಗೊತ್ತಿಲ್ಲ. ಅದನ್ನು ತಿಳಿದುಕೊಳ್ಳಲು ಯತ್ನಿಸುವೆ.

ನ.20ರಂದು ಬಳ್ಳಾರಿಯಲ್ಲಿ ಬೃಹತ್‌ ಎಸ್‌ಟಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ನಗರದ ಹೊರ ವಲಯದಲ್ಲಿ ಇರುವ 100 ಎಕರೆ ಜಾಗದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next