Advertisement

ಪ್ರಾದೇಶಿಕ ಪಕ್ಷಗಳೇ ನಿರ್ಣಾಯಕ: ಮಮತಾ

12:30 AM Jan 18, 2019 | Team Udayavani |

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇದೇ 19ರಂದು ತೃಣಮೂಲ ಕಾಂಗ್ರೆಸ್‌ ಆಯೋಜಿಸಿರುವ ಪ್ರತಿಪಕ್ಷಗಳ ಮೆಗಾ ರ್ಯಾಲಿಯು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ನಾಶಕ್ಕೆ ಕಾರಣವಾಗಲಿದೆ ಎಂದು ಪ. ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲ್ಲದೆ, ಪ್ರಾದೇಶಿಕ ಪಕ್ಷಗಳೇ ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ ಎಂದೂ ಅಭಿಪ್ರಾಯಪಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸ್ಥಾನಗಳು 125ನ್ನು ದಾಟುವುದಿಲ್ಲ. ಪ್ರಾದೇಶಿಕ ಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗಳಿಸಲಿವೆ. ಶನಿವಾರ ನಡೆಯಲಿರುವ ಪ್ರತಿಪಕ್ಷಗಳ ರ್ಯಾಲಿಯು ಬಿಜೆಪಿಯ ಕೊನೇ ಮೊಳೆಯಾಗಲಿದೆ ಎಂದೂ ಅವರು ಹೇಳಿದ್ದಾರೆ. ಇದೇ ವೇಳೆ, ಟಿಎಂಸಿ ಆಯೋಜಿಸಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳುವುದಾಗಿ ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್‌ ಹಾಗೂ ಬಿಎಸ್‌ಪಿ ನಾಯಕ ಸತೀಶ್‌ ಮಿಶ್ರಾ ಘೋಷಿಸಿದ್ದಾರೆ. ವಿಶೇಷವೆಂದರೆ, ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರೂ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

Advertisement

ಎಸ್ಪಿಗೆ ಸಾವಿತ್ರಿ ಫ‌ುಲೆ?: ಈ ನಡುವೆ, ಇತ್ತೀಚೆಗಷ್ಟೇ ಬಿಜೆಪಿಗೆ ರಾಜೀನಾಮೆ ನೀಡಿದ್ದ ಸಂಸದೆ ಸಾವಿತ್ರಿ ಫ‌ುಲೆ ಗುರುವಾರ ಎಸ್‌ಪಿ ನಾಯಕ ಅಖೀಲೇಶ್‌ ಯಾದವ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅವರು ಎಸ್‌ಪಿಗೆ ಸೇರ್ಪಡೆ ಯಾಗಲಿದ್ದಾರೆಯೇ ಎಂಬ ಶಂಕೆಯೂ ವ್ಯಕ್ತವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next