Advertisement

ಜ.3ರಂದೇ ನೋಂದಣಿ ಮಾಹಿತಿ ಕೌಂಟರ್‌ ಆರಂಭ

06:25 AM Dec 07, 2018 | |

ಧಾರವಾಡ: 84ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ನೋಂದಾಯಿತ ಪ್ರತಿನಿಧಿಗಳಿಗೆ ಮಾಹಿತಿ ಒದಗಿಸುವ 75 ನೋಂದಣಿ ಮಾಹಿತಿ ಕೌಂಟರ್‌ಗಳನ್ನು 2019ರ ಜ. 3ರಂದು ಸಂಜೆ 4 ಗಂಟೆಯಿಂದಲೇ ಇಲ್ಲಿಯ ಕೃಷಿ ವಿವಿ ಆವರಣದಲ್ಲಿ ಕಾರ್ಯಾರಂಭಗೊಳಿಸಲು ತೀರ್ಮಾನಿಸಲಾಗಿದೆ.

Advertisement

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಉಪ ಮೇಯರ್‌ ಮೇನಕಾ ಹುರಳಿ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ಸೇರಿದ್ದ ಸಮ್ಮೇಳನದ ನೋಂದಣಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ದೂರದ ಜಿಲ್ಲೆಗಳಿಂದ ಸಮ್ಮೇಳನಕ್ಕೆ ಆಗಮಿಸುವ ಪ್ರತಿನಿಧಿಗಳ ಅನುಕೂಲಕ್ಕಾಗಿ, ಜೊತೆಗೆ ಸಮ್ಮೇಳನ ಆರಂಭಗೊಳ್ಳುವ ದಿನ ಜ.4 ರಂದು ಪ್ರತಿನಿಧಿಗಳಿಗೆ ಸುಲಭವಾಗಿ ಕಿಟ್‌ಗಳ ವಿತರಣೆ ನಡೆಯಬೇಕೆಂಬ ಉದ್ದೇಶದಿಂದ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದಂತೆ ಈ ತೀರ್ಮಾನ ಕೈಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next