Advertisement
ಈ ಎಲ್ಲ ವೈದ್ಯರನ್ನು ಹಾಗೂ ದಾದಿಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಸ್ಪತ್ರೆ ರೂಪು-ರೇಷೆ ಸಿದ್ಧಪಡಿಸಿಕೊಂಡಿದೆ.
ಒಟ್ಟಾರೆಯಾಗಿ 25 ವೈದ್ಯರ ತಂಡ ಸೇವೆ ಸಲ್ಲಿಸುತ್ತಿದೆ. ಎಲ್ಲ ನಿರಾಶ್ರಿತರ ಕೇಂದ್ರದಲ್ಲೂ ಇಬ್ಬರು ವೈದ್ಯರು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಶಿಬಿರದಲ್ಲಿ ಇರುವ 30 ವರ್ಷ ಮೇಲ್ಪಟ್ಟ ಎಲ್ಲರ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಿದರು.
Related Articles
Advertisement
ನಿರಾಶ್ರಿತರಲ್ಲಿ ಒಳ ರೋಗಿ ವಿಭಾಗದಲ್ಲಿ 30 ಮಂದಿಗೆ ಹಾಗೂ ಹೊರರೋಗಿ ವಿಭಾಗದಲ್ಲಿ 60 ಮಂದಿಗೆ ಚಿಕಿತ್ಸೆ ನೀಡಿದ್ದೇವೆ. 10 ಮಂದಿ ಇನ್ನೂ ಒಳರೋಗ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್ ಹೇಳಿದರು.
ಲಘುಉಷ್ಣತೆ(ಹೈಪೋಥರ್ಮಿಯಾ) ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತಿದೆ. ವಿಪರಿತ ಮಳೆಯಿಂದಾಗಿ ಮನುಷ್ಯನ ದೇಹದಲ್ಲಿ ಉಷ್ಣಾಂಶ ಕಡಿಮೆಯಾದಾಗದ ಈ ಸಮಸ್ಯೆ ಕಂಡು ಬರುತ್ತದೆ. ಅದಕ್ಕಾಗಿ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯರಿಗೆ ಹಾಗೂ ಪುರಷರಿಗೆ ಪ್ರತ್ಯೇಕವಾದ ಎರಡು ವಾರ್ಮ್(ಉಷ್ಣಾಂಶ ಹೆಚ್ಚಿಸಲು ಸಹಕಾರಿ) ಕೊಠಡಿ ವ್ಯವಸ್ಥೆ ಮಾಡಿದ್ದೇವೆ. ತಲಾ 8 ಹಾಸಿಗೆಯ ವ್ಯವಸ್ಥೆ ಮಾಡಲಾಗಿದೆ. ಅಗತ್ಯವಿರುವ ರೋಗಿಗಳಿಗೆ ವಾರ್ಮ್ ಕೊಠಡಿಯಲ್ಲಿ ಚಿಕಿತ್ಸೆ ನೀಡಿ ನಂತರ ವಾರ್ಡ್ಗೆ ವರ್ಗಾಯಿಸುತ್ತೇವೆ. ಆಸ್ಪತ್ರೆಯಲ್ಲಿ 50 ವೈದ್ಯರು ಮತ್ತು 200 ದಾದಿಯರು ಮೂರು ಪಾಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ರೋಗಿಗಳನ್ನು ಮೈಸೂರು ಅಥವಾ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಡುವ ವ್ಯವಸ್ಥೆಯೂ ಆಗುತ್ತಿದೆ ಎಂದರು.