Advertisement

ಆಗಸ್ಟ್‌ ಅಂತ್ಯದೊಳಗೆ ಪಿ.ಜಿ.ಗಳ ನೋಂದಣಿ: ಡಿಸಿ ಸೂಚನೆ

10:25 PM Jul 17, 2019 | Sriram |

ಉಡುಪಿ: ಮಹಿಳೆಯರ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಪಿ.ಜಿ.ಗಳನ್ನು ಆಗಸ್ಟ್‌ ಅಂತ್ಯದೊಳಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚನೆ ನೀಡಿದ್ದಾರೆ.

Advertisement

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು.

ಮಣಿಪಾಲದ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹವೊಂದರ ಕಟ್ಟಡ ದುರಸ್ತಿ ನಡೆಯುತ್ತಿದ್ದು ಮಹಿಳೆಯರ ಸುರಕ್ಷತೆಗೆ ಸಿಸಿ ಟಿವಿ ಅಳವಡಿಕೆಗೆ ಸೂಚಿಸಿದ್ದರೂ ಈವರೆಗೆ ಸಿಸಿಟಿವಿ ಅಳವಡಿಸದಿರುವ ಬಗ್ಗೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ, ತತ್‌ಕ್ಷಣದಲ್ಲಿ ಸಿಸಿಟಿವಿ ಅಳವಡಿಸುವಂತೆ ಹಾಸ್ಟೆಲ್‌ ವಾರ್ಡನ್‌ಗೆ ಸೂಚನೆ ನೀಡಿದರು. ಆಗಸ್ಟ್‌ 15ರ ಒಳಗೆ ಹಾಸ್ಟೆಲ್‌ನಲ್ಲಿರುವ ಇತರ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್‌ ಅವರಿಗೆ ಸೂಚಿಸಿದರು.

ಕಟಪಾಡಿಯಲ್ಲಿರುವ ಮಹಿಳಾ ಮಂಡಳಿ ಉದ್ಯೋಗಸ್ಥ ಮಹಿಳೆಯರ ವಸತಿ ಗೃಹ ನಿರ್ಮಾಣ ಕಾರ್ಯ ಅನುದಾನ ಕೊರತೆಯಿಂದ ಕುಂಠಿತ ಗೊಂಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಮಹಿಳಾ ರಕ್ಷಣೆ: ಸಹಾಯವಾಣಿ 181
ಮಹಿಳೆಯರು ಯಾವುದೇ ತುರ್ತು ಸಂದರ್ಭದಲ್ಲಿ ರಕ್ಷಣೆ ಹಾಗೂ ನೆರವಿಗೆ ಸಹಾಯವಾಣಿ 181ಗೆ ಕರೆಮಾಡಿ, ಸಹಾಯ ಪಡೆಯಲು ಅವಕಾಶ ಇರುವ ಬಗ್ಗೆ ಮಾಹಿತಿ ನೀಡಿ, ಈ ಸಹಾಯವಾಣಿಗೆ ಈವರೆಗೆ ಬಂದಿರುವ ಕರೆಗಳು ಹಾಗೂ ಅವುಗಳ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿಯನ್ನು ಮುಂದಿನ ಸಭೆಯಲ್ಲಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

Advertisement

ಮಾದಕವಸ್ತು: ಮೂಲ ಪತ್ತೆಗೆ ಸಲಹೆ
ಮಾದಕ ವ್ಯಸನಿಗಳನ್ನು ಬಂಧಿಸಿ ಬಿಡುಗಡೆ ಮಾಡುವ ಮೊದಲು ಮಾದಕ ವಸ್ತು ಪೂರೈಕೆ ಆಗುತ್ತಿರುವ ಮೂಲವನ್ನು ಪತ್ತೆ ಹಚ್ಚಿದರೆ ಈ ಪಿಡುಗನ್ನು ನಿರ್ಮೂಲನೆ ಮಾಡಲು ಸಹಕಾರಿಯಾಗುತ್ತದೆ ಎಂದು ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಕಾಂತ್‌ ಪಡುಬಿದ್ರಿ ಅಭಿಪ್ರಾಯ ಪಟ್ಟರು. ಇದಕ್ಕೆ ಎಎಸ್ಪಿ ಕುಮಾರ್‌ಚಂದ್ರ ಪ್ರತಿಕ್ರಿಯಿಸಿ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಸ್ತುತ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಮೂಲಕ ಮಾದಕ ವಸ್ತು ಪೂರೈಕೆ ಆಗುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. ಆನ್‌ಲೈನ್‌ನಲ್ಲಿ ಮಾದಕ ವಸ್ತುಗಳ ಪೂರೈಕೆ ಆಗುತ್ತಿರುವ ಬಗ್ಗೆ ಸೈಬರ್‌ಕ್ರೆçಮ್‌ ಬ್ರಾಂಚ್‌ಗೆ ಮಾಹಿತಿ ನೀಡಿ ತನಿಖೆ ನಡೆಸುವಂತೆ ಮತ್ತು ವೈದ್ಯರ ಔಷಧ ಚೀಟಿ ಇಲ್ಲದೆ ಮಾರಾಟವಾಗುತ್ತಿರುವ ಮೆಡಿಸಿನ್‌ಗಳನ್ನು ಪೂರೈಸುತ್ತಿರುವ ಅಂಗಡಿಗಳ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಬಾಲ್ಯವಿವಾಹ ತಡೆಗೆ ಕ್ರಮ
ಬಾಲ್ಯ ವಿವಾಹ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಸಲುವಾಗಿ ಸಾಮೂಹಿಕ ವಿವಾಹ ನಡೆಸುವಾಗ ವಧು-ವರನ ವಯಸ್ಸನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ಸೂಚನೆ ನೀಡಿದರು.

ಹೊಸದಾಗಿ ಕಾನೂನಿನಲ್ಲಿರುವ ಶಿಕ್ಷೆಯ ಕುರಿತು ಅರಿವು ಮೂಡಿಸಬೇಕು. ಮಕ್ಕಳ ಸುರಕ್ಷಾ ಸಮಿತಿಯನ್ನು ಬಲ ಪಡಿಸುವ ಸಲುವಾಗಿ ನೋಡಲ್‌ ಆಫೀಸರಾಗಿ ಆಯ್ಕೆಗೊಂಡ ಶಿಕ್ಷಕರಿಗೆ ಮುಂದಿನ ತಿಂಗಳು ಕಾರ್ಯಾಗಾರ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಪ್ರೀ ಮ್ಯಾರೆಜ್‌ ಕೌನ್ಸಿಲಿಂಗ್‌ ಕಾರ್ಯಕ್ರಮ ನಡೆಯದಿರುವ ಬಗ್ಗೆ ಪ್ರತಿಕ್ರಿಯಿಸಿ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಕಾರ್ಯಕ್ರಮ ನಡೆಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ವರದಕ್ಷಿಣೆ, ಕೌಟುಂಬಿಕ ಹಿಂಸೆ
ವರದಕ್ಷಿಣೆ ನಿಷೇಧ ಕಾಯ್ದೆಯಡಿ 2019ರಲ್ಲಿ ಈವರೆಗೆ 13 ಪ್ರಕರಣಗಳು ದಾಖಲಾಗಿದ್ದು, ಕೌಟುಂಬಿಕ ಹಿಂಸೆಯ 29 ಪ್ರಕರಣಗಳು ದಾಖಲಾಗಿದೆ ಎಂದು ಎಎಸ್ಪಿ ಕುಮಾರ್‌ಚಂದ್ರ ತಿಳಿಸಿದರು.

ಸಖೀ ಒನ್‌ ಸ್ಟಾಪ್‌: 32 ಪ್ರಕರಣ
ಸಖೀ ಒನ್‌ ಸ್ಟಾಪ್‌ ಸೆಂಟರ್‌ನಲ್ಲಿ ನವೆಂಬರ್‌ 2018 ರಿಂದ ಜೂನ್‌ 2019ರ ವರೆಗೆ ಒಟ್ಟು 32 ಪ್ರಕರಣಗಳು ದಾಖಲಾಗಿದ್ದು, 20 ಪ್ರಕರಣಗಳು ಇತ್ಯರ್ಥಗೊಂಡಿದೆ. 11 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಇತರೆ 1 ಪ್ರಕರಣ ಬಾಕಿ ಇದೆ. ಸ್ಥೆçರ್ಯ ನಿಧಿ ಯೋಜನೆಯಡಿಯಲ್ಲಿ ಈವರೆಗೆ 3 ಮಂದಿಗೆ ತಲಾ 25,000ರೂ. ತುರ್ತು ಪರಿಹಾರ ನೀಡಲಾಗಿದೆ. 2019-20ನೇ ಸಾಲಿನ ಜೂನ್‌ ವರೆಗೆ ಉಡುಪಿ 2, ಕುಂದಾಪುರ 7, ಕಾರ್ಕಳ 1 ಒಟ್ಟು 10 ಕೌಟುಂಬಿಕ ಹಿಂಸೆ ಪ್ರಕರಣಗಳು ದಾಖಲಾಗಿದ್ದು, 7 ಪ್ರಕರಣ ಸಂರಕ್ಷಣಾಧಿಕಾರಿಗಳಿಂದ ಇತ್ಯರ್ಥಗೊಂಡಿದೆ. 3 ಪ್ರಕರಣ ಬಾಕಿ ಇರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದರು.

ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಲೇಲೆ, ಜಿ.ಪಂ. ಸಿಇಒ ಸಿಂಧೂ ಬಿ ರೂಪೇಶ್‌ ಉಪಸ್ಥಿತರಿದ್ದರು.

ಮಾದಕ ವಸ್ತುಗಳ ದುಷ್ಪರಿಣಾಮ
ಶಾಲಾ ಕಾಲೇಜುಗಳಲ್ಲಿ ಹದಿಹರೆಯದ ಮಕ್ಕಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಶಾಲಾ ಶಿಕ್ಷಕರನ್ನೇ ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಿ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತದೆ ಎಂದು ಜಿಲ್ಲಾ ಪ್ರಭಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಎಂ.ಜಿ. ರಾಮ ತಿಳಿಸಿದರು. ಈ ಬಗ್ಗೆ ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷcಟಕ್ಕೆ ಬಲಿಯಾದ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯಿಂದ ಎಷ್ಟು ಬಾರಿ ವೈದ್ಯರು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಕುರಿತು ವರದಿ ನೀಡುವಂತೆ ಸೂಚನೆ ನೀಡಿದರು.

ಭಿಕ್ಷಾಟನೆ ಮಕ್ಕಳ ರಕ್ಷಣೆ
ಭಿಕ್ಷಾಟನೆಯಲ್ಲಿ ಗುರುತಿಸಿಕೊಂಡ ಮಕ್ಕಳನ್ನು ಗುರುತಿಸಿ ಮತ್ತೆ ಭಿಕ್ಷಾಟನೆಯಲ್ಲಿ ತೊಡಗಿಕೊಳ್ಳದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನಿಸಿದ ಜಿಲ್ಲಾಧಿಕಾರಿ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟು ಶಾಲೆಗೆ ಸೇರಿಸ್ಪಟ್ಟ ಮಕ್ಕಳು ಮತ್ತೆ ಭಿಕ್ಷಾಟನೆಯಲ್ಲಿ ತೊಡಗಿಕೊಳ್ಳದಂತೆ ರಕ್ಷಿಸಲು ಶಾಲಾ ಮುಖ್ಯೋಪಾಧ್ಯಾಯರು ಮಕ್ಕಳ ಹಾಜರಾತಿಯ ವರದಿಯನ್ನು ಇಲಾಖೆಗೆ ನೀಡುವಂತೆ ಸೂಚನೆ ನೀಡಬೇಕು ಹಾಗೂ ಮಕ್ಕಳು ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ಬಗ್ಗೆ ಡಿಡಿಪಿಐ ಅವರು ಮಾಹಿತಿ ಪಡೆಯುತ್ತಿರಬೇಕು ಹಾಗೂ ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟು ಶಾಲೆಯಲ್ಲಿ ಒಂದು ವರ್ಷ ಪೂರೈಸಿದ ಮಕ್ಕಳನ್ನು ಮಕ್ಕಳ ಗ್ರಾಮ ಸಭೆಗಳಲ್ಲಿ ಗುರುತಿಸಿ ಮಕ್ಕಳಿಗೆ ಪೋ›ತ್ಸಾಹ ನೀಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next