Advertisement

ಕರಾವಳಿ ಭಾಗದ ಕಟ್ಟಡಗಳ ಸಕ್ರಮ: ತಿಂಗಳಲ್ಲಿ ಕ್ರಮದ ಭರವಸೆ

08:20 PM Jun 19, 2020 | Sriram |

ಬೆಂಗಳೂರು:ಕರಾವಳಿ ಭಾಗದಲ್ಲಿ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಕಟ್ಟಡಗಳ ಸಕ್ರಮಗೊಳಿಸುವಿಕೆ ಸಂಬಂಧ ಒಂದು ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್‌ ಭರವಸೆ ನೀಡಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರೊಂದಿಗೆ ಸಚಿವರನ್ನು ಭೇಟಿಯಾಗಿ ಮಾತನಾಡಿದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಏಕ ನಿವೇಶನ ನೋಂದಣಿ, ಕಟ್ಟಡ ಪರವಾನಿಗೆ, ಪರಿವರ್ತನೆ, ಇ-ಖಾತಾ, ಖಾತೆ ಬದಲಾವಣೆ ಸೇರಿ ಹಲವು ಸಮಸ್ಯೆ ಬಗೆಹರಿಸಲಾಗುವುದು. ರಾಜ್ಯದ ಇತರೆಡೆ ಇದೇ ರೀತಿಯ ಸಮಸ್ಯೆ ಇದ್ದು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಗದಿಪಡಿಸಲಾಗಿರುವ ಅಭಿವೃದ್ದಿ ಶುಲ್ಕ ಕುರಿತು ಸಮಗ್ರವಾಗಿ ಚರ್ಚಿಸಿ ಪರಿಹಾರ ಕಂಡು ಹಿಡಿಯಲು ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಹೆಚ್ಚುವರಿ ಶುಲ್ಕ ಕಡಿತಗೊಳಿಸುವಂತೆ ತಿಳಿಸಿದರು.

ನೆನೆಗುದಿಗೆ ಬಿದ್ದಿರುವ ನಗರ/ಪುರಸಭೆಯ ಮಾಸ್ಟರ್‌ ಪ್ಲ್ರಾನ್‌ ಯೋಜನೆಯನ್ನು ಕೂಡಲೇ ತಯಾರಿಸಲು ಆದೇಶ ನೀಡಿದರಲ್ಲದೆ, ಮಾಸ್ಟರ್‌ ಪ್ಲ್ರಾನ್‌ ತಯಾರಿಸುವವರೆಗೆ ತಡೆ ಹಿಡಿದಿರುವ ಭೂ-ಪರಿವರ್ತನೆಯ ವ್ಯವಸ್ಥೆಯನ್ನು ಮರಳಿ ಜಾರಿಗೆ ತರುವಂತೆಯೂ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ತೋಟಗಾರಿಕೆ ಸಚಿವ ನಾರಾಯಣಗೌಡ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರ ಜತೆಯೂ ಶಾಸಕರು ಹಲವು ವಿಷಯಗಳ ಬಗ್ಗೆ ಚರ್ಚಿಸಿದರು.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರಾದ ಯು. ರಾಜೇಶ್‌ ನಾಯ್ಕ, ಉಮಾನಾಥ್‌ ಎ.ಕೋಟ್ಯಾನ್‌, ಸಂಜೀವ ಮಠಂದೂರು, ಅಂಗಾರ ಎಸ್‌, ಡಿ. ವೇದವ್ಯಾಸ ಕಾಮತ್‌, ಡಾ.ಭರತ್‌ಶೆಟ್ಟಿ, ಹರೀಶ್‌ ಪೂಂಜಾ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next