Advertisement

Rahul Gandhi ಸದಸ್ಯತ್ವ ಪುನಸ್ಥಾಪನೆ ತಾತ್ಕಾಲಿಕ ಪರಿಹಾರ ಮಾತ್ರ: ತೇಜಸ್ವಿ ಸೂರ್ಯ

05:02 PM Aug 07, 2023 | Team Udayavani |

ಭೋಪಾಲ್‌ : ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಪುನಸ್ಥಾಪಿಸಿರುವುದು ತಾತ್ಕಾಲಿಕ ಪರಿಹಾರವಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ಪಿಟಿಐ ನೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ”ವಿಚಾರಣೆ ನಡೆದು, ಅಂತಿಮವಾಗಿ ವಿಷಯ ಇತ್ಯರ್ಥವಾಗುವವರೆಗೆ ಇದು ತಾತ್ಕಾಲಿಕ ಪರಿಹಾರವಾಗಿದೆ. ಸುಪ್ರೀಂ ಕೋರ್ಟ್‌ನ ಈ ಮಧ್ಯಂತರ ಆದೇಶದ ಪರಿಣಾಮವಾಗಿ, ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ತಾತ್ಕಾಲಿಕವಾಗಿ ಪುನಸ್ಥಾಪಿಸಲಾಗಿದೆ. ಗುಜರಾತ್ ಹೈಕೋರ್ಟ್‌ನ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದರೆ, ಸ್ವಾಭಾವಿಕವಾಗಿ ರಾಹುಲ್ ಗಾಂಧಿ ಅವರ ಸದಸ್ಯತ್ವವನ್ನು ಮತ್ತೊಂದು ಬಾರಿ ರದ್ದುಗೊಳಿಸಲಾಗುತ್ತದೆ. ಅಲ್ಲಿಯವರೆಗೆ ಅವರು ಸಂತೋಷವಾಗಿರಬಹುದು”ಎಂದು ಸೂರ್ಯ ಹೇಳಿದರು.

ಮೋದಿ ಉಪನಾಮ ಪ್ರಕರಣದಲ್ಲಿ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯವು ಅವರಿಗೆ ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಕೆಲವೇ ದಿನಗಳಲ್ಲಿ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ಸೋಮವಾರ ಪುನಸ್ಥಾಪಿಸಲಾಗಿದೆ. ಸೋಮವಾರ ಸಂಸತ್ತಿಗೆ ಆಗಮಿಸಿದ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯವಾಗಿ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next