Advertisement

Karkala: 5 ವರುಷಕ್ಕೊಮ್ಮೆ ಮನೆಬಾಗಿಲಿಗೆ ಬರುವ ಕಾಂಗ್ರೆಸ್ಸನ್ನು ತಿರಸ್ಕರಿಸಿ; ಸುನಿಲ್

01:10 PM Apr 25, 2023 | Team Udayavani |

ಕಾರ್ಕಳ; ಕೊರೊನಾ, ಪ್ರಾಕೃತಿಕ ಅವಘಡ ಸಂಭವಿಸಿ ಕ್ಷೇತ್ರದ ಜನ ಸಂಕಷ್ಟಕ್ಕೆ ಒಳಗಾಗಿ ನೋವಿನಲ್ಲಿದ್ದ ವೇಳೆ ಗುಹೆ ಸೇರಿಕೊಂಡಿದ್ದ ಕಾಂಗ್ರೆಸ್  ಈಗ ಚುನಾವಣೆ ವೇಳೆ ಯಾವ ಮುಖ ಹೊತ್ತುಕೊಂಡು ಜನರ ಬಳಿಗೆ ಹೋಗಿ ಮತ ಯಾಚಿಸುತ್ತಿದೆ?  5 ವರುಷಕ್ಕೊಮ್ಮೆ ಜನರ ಮನೆಬಾಗಿಲಿಗೆ  ಬರುವ ಕಾಂಗ್ರೆಸ್ಸನ್ನು ಕ್ಷೇತ್ರದ ಜನ ತಿರಸ್ಕರಿಸಬೇಕು ಎಂದು ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಕರೆ ನೀಡಿದರು.

Advertisement

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಹಿರ್ಗಾನದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಜನರ ಕಷ್ಟ- ಕಾರ್ಪಣ್ಯ ನೋವುಗಳಲ್ಲಿ ಬಿಜೆಪಿ ಜನರ ಜತೆ ನಿರಂತರವಾಗಿ ನಿಂತಿದೆ. ಜನಸಾಮಾನ್ಯರು ನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅವರಿದ್ದ ಸ್ಥಳಕ್ಕೆ ತೆರಳಿ ಸಮಸ್ಯೆ ಆಲಿಸಿ ಅವರ ಕಷ್ಟಗಳನ್ನು ಪರಿಹರಿಸಿದ್ದೇವೆ. ಪ್ರತಿ ಹಳ್ಳಿಯ ಕಟ್ಟ ಕಡೆಯ ನಿವಾಸಿಯ ಕುಟುಂಬಕ್ಕೆ ಬಿಜೆಪಿ ಸ್ಪಂದಿಸಿದೆ. ಇತರೆಲ್ಲ ಸಮಯಗಳಲ್ಲಿ  ಸ್ಪಂದಿಸುವುದು ಇದ್ದಿದ್ದೆ, ಆದರೆ ಕೊರೊನಾ ಬಂದು   ಜನ ನೋವಿನಲ್ಲಿರುವಾಗ ಅವರ ಬಳಿ ತೆರಳಿ  ವೈದ್ಯಕೀಯ ಸೇವೆ, ಆರೋಗ್ಯ ತಪಾಸಣೆ, ಕಿಟ್  ನೀಡಿದಲ್ಲದೆ ನಾಗರಿಕರ ಆರೋಗ್ಯ, ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಹೆಚ್ಚಿನ ಹಾನಿ ಸಂಭವಿಸದಂತೆ ತಡೆದು ಕ್ರಮ ಕೈಗೊಂಡಿದ್ದೇವೆ.

ಮುಂಬಯಿ, ಪೂನಾದಲ್ಲಿರುವ ನಮ್ಮ‌ ಸ್ನೇಹಿತರು  ಮರಳಿ ಕ್ಷೇತ್ರಕ್ಕೆ ಬಂದಾಗ ಅವರಿಗೆ ಯಾವುದೇ ತೊಂದರೆ ಆಗದಂತೆ ಕ್ವಾರಂಟೈನ್ ಸ್ಥಾಪಿಸಿ, ವ್ಯವಸ್ಥೆ ಕಲ್ಲಿಸಿದ್ದೇವೆ. ಆಗ ಇದೇ ಕಾಂಗ್ರೆಸ್ಸಿಗರು ಎಲ್ಲಿ ಅಡಗಿ ಕುಳಿತಿದ್ದರು ಎಂದು ಪ್ರಶ್ನಿಸಿರುವ ಅವರು 5 ವರುಷ ಜನಸಾಮಾನ್ಯರ ಕಡೆ ತಿರುಗಿಯು ನೋಡದವರು ಈಗ ಚುನಾವಣೆ ಹೊತ್ತಲ್ಲಿ ನಾನಾ ಭರವಸೆ, ಗ್ಯಾರಂಟಿ ಕಾರ್ಡ್ ಗಳನ್ನು ಹಿಡಿದುಕೊಂಡು ವಿವಿಧ  ಮುಖವಾಡ ಹೊತ್ತು ಜನರ ಮನೆ ಬಾಗಿಲಿಗೆ ಬಂದು ಭರವಸೆಗಳನ್ನು ನೀಡುತ್ತಿದ್ದಾರೆ.

ಇಷ್ಟು ದಿನವೂ ಒಮ್ಮೆಯು ಕ್ಷೇತ್ರದ ಕಡೆ ತಿರುಗಿ ನೋಡದವರಿಗೆ ಈಗ ಜನರ ನೆನಪಾಗಿರುವುದು ಹಾಸ್ಯಾಸ್ಪದ ಎಂದು ಹೇಳಿದರು. ಕ್ಷೇತ್ರದ ಜನ ಸಮಸ್ಯೆಗೆ ಒಳಗಾದಗ, ಮೂಲಭೂತ ಸೌಕರ್ಯ ಕೇಳಿ ಬಂದಾಗ ಯಾವುದೇ ಜಾತಿ, ಧರ್ಮ ಎಂಬ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನ ನ್ಯಾಯ ನೀಡಿದ್ದೇವೆ. ಇದನ್ನು ಕ್ಷೇತ್ರದ ಮತದಾರರು ಖಂಡಿತ ಅರ್ಥ ಮಾಡಿಕೊಳ್ಳುತ್ತಾರೆ.

ಈ ಚುನಾವಣೆಯಲ್ಲಿ ಅಪಪ್ರಚಾರ ನಡೆಸುವವರನ್ನು, 5 ವರುಷಕ್ಕೆ ಒಮ್ಮೆ ಮನೆಗಳಿಗೆ ಬರುವವರನ್ನು ತಿರಸ್ಕರಿಸಿ ಜನರ ಜತೆಗೆ ಸದಾ ಕಾಲವು ಇದ್ದ ಬಿಜೆಪಿ ಶಾಸಕನಾದ ನನ್ನನ್ನು ಬೆಂಬಲಿಸುವಂತೆ ಅವರು  ಮನವಿ ಮಾಡಿದರು. ಪ್ರಮುಖರಾದ ಸಂತೋಷ್ ಶೆಟ್ಟಿ, ಶಂಭು ಹೆಗ್ಡೆ, ಹರಿಶ್ಚಂದ್ರ ಕುಲಾಲ್ ಸಹಿತ ಅನೇಕ ಮಂದಿ ಗಣ್ಯರು, ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

ಕಡ್ತಲ ಬಿಜೆಪಿ ಕಾರ್ಯಕರ್ತರ ಸಭೆ

ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಂಬಿಸುತ್ತವೆ. ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ  ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ  ಮತ ಹಾಕದೆ ಅಭಿವೃದ್ದಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಹೇಳಿದರು.

ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ. ಕಾಂಗ್ರೆಸ್ಸಿಗೆ ಹಾಕುವ ಒಂದೊಂದು ಮತವೂ ಅದು ಪಿಎಪ್ ಐ ಸಂಘಟನೆ ಬಲಪಡಿಸಿದಂತೆ. ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿಗಳು ಸಮಾಜದಲ್ಲಿ ವಿಜ್ರಂಭಿಸಿ ಕೇಕೆ ಹಾಕುತ್ತವೆ. ಮತ್ತೊಂದು ಅಪಘಾನಿಸ್ತಾನ ಆಗಲು ಬಿಡಬಾರದು ಎಂದರು. ಬಿಜೆಪಿ ಸರಕಾರ  ಗೋಹತ್ಯೆ, ಲವ್ ಜಿಹಾದ್, ಮತಾಂತರ ನಿಷೇಧ ಕಾನೂನುಗಳನ್ನು ತಂದು ಹಿಙದೂಗಳ ರಕ್ಷಣೆಗೆ ಕಂಕಣ ಬದ್ದವಾಗಿದೆ.

ಕಾಂಗ್ರೆಸ್ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ, ಮತಾಂತರ ಕಾನೂನು ವಾಪಸ್ ಪಡೆಯುವ ಭರವಸೆಯನ್ನು ಈಗಾಗಲೇ ಆ ಪಕ್ಷದ ಮುಖಂಡರು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇಂತಹವರಿಗೆ ಅಧಿಕಾರ ಸಿಕ್ಕರೆ  ರಾಜ್ಯದ ಜನತೆಯ ಅದರಲ್ಲೂ ಹಿಂದೂಗಳ ಪರಿಸ್ಥಿತಿ ಯಾವ ರೀತಿ ಇರಬಹುದು ಎಂದು ನೀವೊಮ್ಮೆ ಊಹಿಸಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ದೆಸ್ ಅಧಿಕಾರಕ್ಕೆ ಬರಬಾರದು. ಅದನ್ನು ತಡೆಯಲು ರಾಜ್ಯದಲ್ಲಿ ಮತ್ತು ಕಾರ್ಕಳ ವಿಧಾನ ಸಭಾ ಕ್ಷೇತ್ರ ಎರಡೂ  ಕಡೆ  ಬಿಜೆಪಿ ಶಾಸಕ ಇರಬೇಕು.  ಕ್ಷೇತ್ರದ ಮತದಾರರು ಈ ಎಲ್ಲ ಅಂಶವನ್ನು ಮನದಲ್ಲಿ ಇಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿಕೊಡಬೇಕು ಎಂದರು.

ಪ್ರಮುಖರಾದ ದಿನೇಶ್ ಪೈ, ಸಂಜೀವ ಪೂಜಾರಿ, ದಯಾನಂದ ಹೆಗ್ಡೆ ಮೊದಲಾದ ಮುಖಂಡರು, ಕಾರ್ಯಕರ್ತರು ಉಪಸ್ಣಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next