Advertisement

Agri: ಕೃಷಿ ಭಾಗ್ಯ ಯೋಜನೆಗೆ ಸರಕಾರದಿಂದ ಮರುಚಾಲನೆ

11:45 PM Nov 17, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೃಷಿ ಭಾಗ್ಯ ಯೋಜ ನೆಯನ್ನು ಮರುಜಾರಿಗೊಳಿಸಿ ಸರಕಾರ ಆದೇಶಿಸಿದ್ದು, ಮಳೆಯಾಶ್ರಿತ ಪ್ರದೇಶಗಳಲ್ಲಿ ಅನುಷ್ಠಾನಕ್ಕೆ ನಿರ್ಧರಿಸಿದೆ.

Advertisement

ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ಕೃಷಿ ಭಾಗ್ಯ ಯೋಜನೆಯನ್ನು ಆ ಬಳಿಕದ ಸರಕಾರವು ಕೇಂದ್ರ ಸರಕಾರದ ಯೋಜನೆಯೊಂದಿಗೆ ವಿಲೀನಗೊಳಿಸಿತ್ತು. ಇದನ್ನು ಪ್ರತ್ಯೇಕವಾಗಿ ಮರುಜಾರಿ ಮಾಡುವುದಾಗಿ 2023-24ನೇ ಸಾಲಿನ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜಿಲ್ಲಾಧಿಕಾರಿ ಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವ ಹಣಾಧಿಕಾರಿಗಳ ಸಭೆಯಲ್ಲಿಯೂ ಕೃಷಿ ಭಾಗ್ಯ ಮರು ಜಾರಿಗೆ ಬೇಡಿಕೆ ಇಡಲಾಗಿತ್ತು. ಪ್ರಸ್ತಾವನೆ ಸಲ್ಲಿಕೆಯಾದ ಕೂಡಲೇ ಆರ್ಥಿಕ ಮತ್ತು ಯೋಜನಾ ಇಲಾಖೆಗಳ ಸಹಮತಿ ಪಡೆದು ಕಳೆದ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಕೂಡ ಕೊಡಲಾಗಿತ್ತು.

ಆಗ ಸರಕಾರದ ಆದೇಶ ಹೊರಬಿದ್ದಿದ್ದು, ಬಜೆಟ್‌ನಲ್ಲೇ 200 ಕೋಟಿ ರೂ.ಗಳನ್ನು ಒದಗಿಸಿದ್ದರಿಂದ ಈ ವರ್ಷದಿಂದಲೇ ರೈತರಿಗೆ ಇದರ ಪ್ರಯೋಜನ ಸಿಗಲಿದೆ.

ರಾಜ್ಯದ ಶೇ.68ರಷ್ಟು ಸಾಗುವಳಿ ಪ್ರದೇಶವು ಮಳೆ ಯಾಶ್ರಿತವಾಗಿದ್ದು, ಶೇ.55ರಷ್ಟು ಆಹಾರಧಾನ್ಯ ಹಾಗೂ ಶೇ.75 ರಷ್ಟು ಎಣ್ಣೆಕಾಳು ಉತ್ಪಾದನೆಯು ಈ ಪ್ರದೇಶದಲ್ಲೇ ಆಗುವುದು ಹೆಚ್ಚು. ರೈತರ ಜಮೀನಿನಲ್ಲಿ ಬಿದ್ದ ಮಳೆ ನೀರನ್ನು ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ಸಂಗ್ರಹಣೆ ಮಾಡಿ ಬೆಳೆಗಳಿಗೆ ಸಂಕಷ್ಟ ಪರಿಸ್ಥಿತಿಯಲ್ಲಿ ನೀರನ್ನು ಒದಗಿಸಲು ಕೃಷಿ ಭಾಗ್ಯದಡಿ ಕೃಷಿ ಹೊಂಡಗಳನ್ನು ನಿರ್ಮಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next