Advertisement

ಫ‌ಸಲ್‌ ಬಿಮಾ ಹಣ ಬಿಡುಗಡೆ ಮಾಡಿ

03:18 PM Mar 25, 2022 | Team Udayavani |

ಗೌರಿಬಿದನೂರು: 2021-22ನೇ ಸಾಲಿನ ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆ ಬೆಳೆ ವಿಮೆ ಹಣ ಈ ಕೂಡಲೇ ಸರ್ಕಾರ ಹಾಗೂ ವಿಮಾ ಕಂಪನಿಯು ಬಿಡುಗಡೆ ಮಾಡಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಗುಂಡಾಪುರ ಲೋಕೇಶ್‌ಗೌಡ ತಿಳಿಸಿದರು.

Advertisement

ನಗರದ ಕೃಷಿ ಇಲಾಖೆ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಕೃಷಿ ಅಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು, ಕಳೆದ ವರ್ಷ ಹಿಂಗಾರು ಮಳೆಯಿಂದ ತಾಲೂಕಿನಲ್ಲಿ ಬೆಳೆ ನಷ್ಟವಾಗಿದೆ. 2021-22ನೇ ಸಾಲಿನ ಹಂಗಾಮಿನಲ್ಲಿ ತಾಲೂಕಿನಲ್ಲಿ 2,526 ರೈತರು ಬೆಳೆ ವಿಮೆ ಪಾವತಿಸಿದ್ದು, ಎಲ್ಲಾ ಬೆಳೆ ಸಂಪೂರ್ಣ ನಾಶವಾಗಿವೆ ಎಂದು ಹೇಳಿದರು.

ಕೃಷಿ ಅಧಿಕಾರಿಗಳು ಶೇ.30ರಿಂದ 40 ಮಾತ್ರ ನಷ್ಟವಾಗಿದೆ ಎಂದು ಸರ್ಕಾರಕ್ಕೆ ವರದಿ ಮಾಡಿ, ರೈತರಿಗೆ ಮೋಸ ಮಾಡಿದ್ದಾರೆ. ಇದರಿಂದ ರೈತರು ಬೀದಿ ಪಾಲಾಗಿದ್ದಾರೆ. ಸಕಾಲಕ್ಕೆ ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆ ಬೆಳೆ ವಿಮೆ ಹಣ ಬಿಡುಗಡೆ ಮಾಡಬೇಕು. ಇದರಿಂದ ಈ ಬಾರಿ ಮುಂಗಾರು ಬಿತ್ತನೆ ಮಾಡಲು ಅನುಕೂಲ ಆಗಲಿದೆ ಎಂದು ಮನವಿಯಲ್ಲಿ ತಿಳಿಸಿದರು.

ರೈತ ಮುಖಂಡರಾದ ಮುದ್ದರಂಗಪ್ಪ, ಸನತ್‌ಕುಮಾರ್‌, ರಾಜು, ಹನುಮಂತಪ್ಪ, ಬಾಬು, ನರಸರೆಡ್ಡಿ, ರಾಮಚಂದ್ರರೆಡ್ಡಿ, ಮುಂತಾದವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next