Advertisement

ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಐದು ಜನರ ಬಿಡುಗಡೆ

07:59 AM Jun 22, 2020 | Suhan S |

ಮೊಳಕಾಲ್ಮೂರು: ಪಟ್ಟಣದ ಹೊರ ವಲಯದಲ್ಲಿರುವ ಆರ್‌.ಎಂ.ಎಸ್‌.ಎ ಬಾಲಕಿಯರ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಮಹಾರಾಷ್ಟ್ರದಿಂದ ಬಂದಿದ್ದ ಐದು ಜನರನ್ನು ಬಿಡುಗಡೆಗೊಳಿಸಲಾಗಿದೆ.

Advertisement

ಈ ಸಂರರ್ಭದಲ್ಲಿ ಮಾತನಾಡಿದ ತಹಶೀಲ್ದಾರ್‌ ಎಂ. ಬಸವರಾಜ್‌, ಮಹಾರಾಷ್ಟ್ರದಿಂದ ತಾಲೂಕಿನ ರಾಂಪುರ ಗ್ರಾಮಕ್ಕೆ ಬಂದಿದ್ದ ಒಂದೇ ಕುಟುಂಬದ ಗಂಡ, ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಆರ್‌.ಎಂ.ಎಸ್‌.ಎ ಬಾಲಕಿಯರ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ನಂತರದ ದಿನಗಳಲ್ಲಿ ಮಹಾರಾಷ್ಟ್ರದ ಪೂನಾದಿಂದ ಪಟ್ಟಣಕ್ಕೆ ಆಗಮಿಸಿದ್ದ 19 ವರ್ಷದ ಯುವಕನನ್ನು ಕೂಡ ಇಲ್ಲಿಯೇ ಕ್ವಾರಂಟೈನ್‌ ಮಾಡಲಾಗಿತ್ತು. ಈ ಐವರ ಗಂಟಲು ಮಾದರಿಯನ್ನು ಲ್ಯಾಬ್‌ಗ ಕಳುಹಿಸಲಾಗಿತ್ತು. ನೆಗೆಟಿವ್‌ ಎಂದು ವರದಿ ಬಂದಿರುವುದರಿಂದ ಹಾಗೂ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಅವಧಿ ಮುಗಿದಿರುವುದರಿಂದ ಸಾಂಸ್ಥಿಕ ಕ್ವಾರಂಟೈನ್‌ ನಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.

ತಾಲೂಕು ಕೋವಿಡ್‌ ನೋಡಲ್‌ ಅಧಿಕಾರಿ ಡಿ. ಚಿದಾನಂದಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ| ಪದ್ಮಾವತಿ, ಶಿರಸ್ತೇದಾರ್‌ ಏಳುಕೋಟಿ, ಗ್ರಾಮಲೆಕ್ಕಾಧಿಕಾರಿ ವಾಲೇಕರ್‌, ಆರ್‌. ಆರ್‌. ತಂಡದ ಒ. ಶ್ರೀನಿವಾಸ್‌, ವೈ. ತಿಪ್ಪೇಸ್ವಾಮಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next