Advertisement

ಸದ್ಯದಲ್ಲಿಯೇ ಕೇಂದ್ರದಿಂದ ನೆರೆ ಪರಿಹಾರ ಹಣ ಬಿಡುಗಡೆ: ಮುಖ್ಯಮಂತ್ರಿ ಯಡಿಯೂರಪ್ಪ

09:02 AM Sep 11, 2019 | Team Udayavani |

ಹುಬ್ಬಳ್ಳಿ: ಕೇಂದ್ರದಿಂದ ಇದುವರೆಗೂ ನೆರೆ ಪರಿಹಾರ ಹಣ ಬಿಡುಗಡೆಯಾಗಿಲ್ಲ, ಸದ್ಯದಲ್ಲಿಯೇ ಬರಲಿದೆ ಎಂದು ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ತಿಳಿಸಿದರು.

Advertisement

ನಗರದ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು, ಬೇರೆ ಅಭಿವೃದ್ದಿ ಕಾರ್ಯಗಳ ಹಣವನ್ನು ನೆರೆ ಪರಿಹಾರಕ್ಕೆ ಬಳಸಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಇಂದು ಬೆಳಗಾವಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ಪರಿಶೀಲಿಸಿದ್ದು. ಕೂಡಲೇ ನಿರಾಶ್ರಿತರಿಗೆ ಶೆಡ್ಡು ಹಾಕಲು ಸೂಚಿಸಿದ್ದೇನೆ. ಶಾಸಕ ಉಮೇಶ ಕತ್ತಿ ವೈಯಕ್ತಿಕ ಕಾರಣದಿಂದ ತಮ್ಮ ಭೇಟಿಗೆ ಬಂದಿರಲಿಲ್ಲ. ಅವರ ಜೊತೆ ಫೋನ್ ನಲ್ಲಿ ಮಾತನಾಡಿದ್ದೇನೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ ಕುರಿತು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದರು. ಇದೇ ವೇಳೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಿಕೆಶಿ ಬಂಧನ ಖಂಡಿಸಿ ಕಾಂಗ್ರೆಸ್ ನವರು ನಾಳೆ ಪ್ರತಿಭಟನೆ ಮಾಡಲು ಅಭ್ಯಂತರವಿಲ್ಲ. ಆದರೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗದಂತೆ ಶಾಂತ ರೀತಿ ಪ್ರತಿಭಟನೆ ಮಾಡಲು. ಅಧಿಕಾರಿಗಳಿಗೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಸೂಚಿಸಿದ್ದೇನೆ.‌ ಪ್ರತಿಪಕ್ಷಗಳಿಗೆ ಡಿಕೆ ಶಿ ಬಂಧನವನ್ನು ರಾಜಕೀಯ ಮಾಡುವುದು ಹೊಸದೇನಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next