Advertisement

ತ‌ರಕಾರಿ-ಹಣ್ಣು ಬೆಳೆಗಾರರಿಗೆ ಪರಿಹಾರ ಧನ ಬಿಡುಗಡೆ

03:21 PM Jun 14, 2020 | Team Udayavani |

ಹಾನಗಲ್ಲ: ಕೋವಿಡ್ ಲಾಕ್‌ ಡೌನ್‌, ಸಾರಿಗೆ ವ್ಯವಸ್ಥೆ ಇಲ್ಲದೆ, ಸಂಸ್ಕರಣ ಮಾಡಲು ಸಾಧ್ಯವಾಗದೆ ನಷ್ಟ ಅನುಭವಿಸುತ್ತಿರುವ ಹಣ್ಣು ಮತ್ತು ತರಕಾರಿ ಬೆಳೆದ ರೈತರಿಗೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಸರಕಾರ ತೋಟಗಾರಿಕಾ ಅಭಿವೃದ್ಧಿ ಯೋಜನೆಯಡಿ ಪರಿಹಾರಧನ ನೀಡುವ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಿದೆ ಎಂದು ಶಾಸಕ ಸಿ.ಎಂ. ಉದಾಸಿ ಹೇಳಿದರು.

Advertisement

ಸುದ್ದಿಗೋಷ್ಠಿ ನಡೆಸಿ ವಿವರ ನೀಡಿದ ಅವರು, ಕೋವಿಡ್‌-19 ಕಾರಣದಿಂದ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ ಡೌನ್‌ ಆದ ಹಿನ್ನೆಲೆಯಲ್ಲಿ, ಹಣ್ಣು ಮತ್ತು ತರಕಾರಿ ಬೆಳೆದ ರೈತರು ಹೊರ ರಾಜ್ಯಗಳಿಗೆ ಮಾರಾಟ ಮಾಡಲು ಸಾಧ್ಯವಾಗದೆ ಹಾಗೂ ಬೆಲೆ ಕುಸಿತದಿಂದ ನಷ್ಟಕ್ಕೊಳಗಾಗಿದ್ದಾರೆ. ಪ್ರಸಕ್ತ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಪರಿಹಾರಧನ ವಿತರಿಸಲು ಸರಕಾರ ಮುಂದಾಗಿದ್ದು, ಪ್ರತಿ ಫಲಾನುಭವಿಗಳಿಗೆ 1 ಹೆಕ್ಟೇರ್‌ ಪ್ರದೇಶಕ್ಕೆ ಕನಿಷ್ಠ 2 ಸಾವಿರದಿಂದ ಗರಿಷ್ಠ 15 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದರು.

ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆ ಆಧಾರದ ಮೇಲೆ 1719 ತರಕಾರಿ ಬೆಳೆಗಾರರು, 1281 ಹಣ್ಣು ಬೆಳೆಗಾರರು ಈ ಯೋಜನೆ ಲಾಭ ಪಡೆಯಲಿದ್ದು, ಪರಿಹಾರಧನ ನೇರವಾಗಿ ರೈತರ ಖಾತೆಗಳಿಗೆ ಸಂದಾಯವಾಗಲಿದೆ ಎಂದು ಶಾಸಕ ಸಿ.ಎಂ.ಉದಾಸಿ ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next