Advertisement

93 ಕೈದಿಗಳಿಗೆ ಬಿಡುಗಡೆ ಭಾಗ್ಯ​​​​​​​

06:35 AM Aug 10, 2018 | Team Udayavani |

ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 93 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

Advertisement

ಗುರುವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಬಿಡುಗಡೆಯಾಗಬೇಕಿರುವ ಕೈದಿಗಳ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನಿಸಿ ಅವರ ಅನುಮೋದನೆ ಪಡೆಯಲು ನಿರ್ಧರಿಸಲಾಯಿತು.

ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಸಂವಿಧಾನದ 161ನೇ ಪರಿಚ್ಛೇದದಂತೆ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 93 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪ್ರಕರಣ ವಾಪಸ್‌ ಕುರಿತು ಸಂಪುಟ ಉಪಸಮಿತಿ:
ರಾಜ್ಯದ ನಾನಾ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿ ಪ್ರಸ್ತುತ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಗೃಹ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಂಪುಟ ಉ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಸಾರಿಗೆ ಸಚಿವರು, ಸಣ್ಣ ಕೈಗಾರಿಕೆ ಸಚಿವರು, ಕೃಷಿ ಸಚಿವರು, ಪೌರಾಡಳಿತ, ಬಂದರು ಮತ್ತು ಮೀನುಗಾರಿಕೆ ಸಚಿವರು, ಸಹಕಾರ ಸಚಿವರು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಇದರ ಸದಸ್ಯರಾಗಿರುತ್ತಾರೆ ಎಂದು ಅವರು ತಿಳಿಸಿದರು.

ಉಳಿದಂತೆ ವಸತಿ ಶಿಕ್ಷಣ ಸಂಸ್ಥೆಗಳ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೂ, ಸಾಕÕ…, ಟೈ, ಬೆಲ್ಟ…ಗಳನ್ನು 10.36 ಕೋಟಿ ರೂ. ವೆಚ್ಚದಲ್ಲಿ ವಿತರಿಸಲು, ಹಾಸನ ಜಿಲ್ಲೆ ಹೊಳೇನರಸೀಪುರ- ಮಾವಿನಕೆರೆ ರೈಲ್ವೆ ಮಾರ್ಗದಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ 39.93 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮೇಲು ಸೇತುವೆ ಕೂಡು ರಸ್ತೆ ನಿರ್ಮಾಣಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದರು.

Advertisement

ಕೆಎಎಸ್‌ ಬಡ್ತಿ ವರ್ಷಮಿತಿ ಇಳಿಕೆ:
ಕೆಎಎಸ್‌ ಅಧಿಕಾರಿಗಳ ಪದೋನ್ನತಿಗಾಗಿ ನಿಗದಿಪಡಿಸಿರುವ ಸೇವಾವಧಿಯನ್ನು ತಲಾ ಒಂದು ವರ್ಷ ಕಾಲ ಇಳಿಸಲು ನಿರ್ಧರಿಸಲಾಗಿದೆ. ಅದರಂತೆ ನೇಮಕಾತಿಯಿಂದ ಸೂಪರ್‌ಟೈಂ ಸ್ಕೇಲ್‌ ಹುದ್ದೆಗೆ ಬಡ್ತಿ ನೀಡಲು ಈ ಹಿಂದೆ ಇದ್ದು 14 ವರ್ಷ ಸೇವಾವಧಿಯನ್ನು 13 ವರ್ಷಕ್ಕೆ ಮತ್ತು ಸೂಪರ್‌ ಟೈಂ ಸ್ಕೇಲ್‌ನಿಂದ ಸೀನಿಯರ್‌ ಸೂಪರ್‌ ಟೈಂ ಸ್ಕೇಲ್‌ ಹುದ್ದೆಗೆ ಬಡ್ತಿ ನೀಡಲು ಈ ಹಿಂದೆ ಇದ್ದ 16 ವರ್ಷದ ಅವಧಿಯನ್ನು 15 ವರ್ಷಕ್ಕೆ ಇಳಿಸಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next