Advertisement

ಸರ್ಕಾರದ ಭ್ರಷ್ಟಾಚಾರ ವಿರುದ್ಧ ಇಂದು ದಾಖಲೆ ಬಿಡುಗಡೆ

09:54 AM Oct 07, 2017 | Team Udayavani |

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರನ ಪಾಲುದಾರಿಕೆ ಇರುವ ಸಂಸ್ಥೆಯೊಂದಕ್ಕೆ ಹೆಬ್ಟಾಳದ ಬಳಿ ಕಾನೂನು ಬಾಹಿರವಾಗಿ 2 ಎಕರೆ ಭೂಮಿ ಹಂಚಿಕೆ ಮಾಡಿರುವ ದಾಖಲೆಗಳನ್ನು ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಶನಿವಾರ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದ ಅಕ್ರಮ ಹಾಗೂ ಭ್ರಷ್ಟಾಚಾರದ ಬಗ್ಗೆ ದಾಖಲೆ ಸಮೇತವಾಗಿ ಬಹಿರಂಗ ಪಡಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಈಗಾಗಲೇ ಘೋಷಣೆ ಮಾಡಿದ್ದರು.

Advertisement

ಅದರಂತೆ ದಾಖಲೆ ಬಹಿರಂಗಗೊಳಿಸಲು ಸಾಧ್ಯವಾಗಿಲ್ಲ. ಹೀಗಾಗಿ ಹಂತ ಹಂತವಾಗಿ ಸರ್ಕಾರದ ಅಕ್ರಮ ಮತ್ತು ಭ್ರಷ್ಟಾಚಾರದ ದಾಖಲೆ ಬಿಡುಗಡೆಗೆ ತೀರ್ಮಾನಿಸಿದ್ದಾರೆ. ಇದರ ಮೊದಲ ಹಂತವಾಗಿ ಇತ್ತೀಚೆಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಕೆಲವು ದಾಖಲೆ ಬಿಡುಗಡೆ ಮಾಡಿದ್ದರು. ಶನಿವಾರ ಬೆಳಗ್ಗೆ 11.45ಕ್ಕೆ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿರುವ ಬಿ.ಜೆ.ಪುಟ್ಟಸ್ವಾಮಿ ಅವರು, ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಮತ್ತಷ್ಟು ದಾಖಲೆ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next