Advertisement

ಮಾನನಷ್ಟ ಮೊಕದ್ದಮೆ: ಎಚ್‌.ಡಿ. ದೇವೇಗೌಡರಿಗೆ ರಿಲೀಫ್

10:38 PM Sep 09, 2022 | Team Udayavani |

ನವದೆಹಲಿ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ನೀಡಿರುವ ಆದೇಶಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.

Advertisement

ಈ ಬಗ್ಗೆ ನ್ಯಾ.ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾ.ಹಿಮಾ ಕೋಹ್ಲಿ ಅವರನ್ನೊಳಗೊಂಡ ನ್ಯಾಯಪೀಠ ಶುಕ್ರವಾರ ಈ ನಿರ್ಧಾರ ಪ್ರಕಟಿಸಿದೆ. ಆದರೆ, ಸಾರ್ವಜನಿಕ ವಲಯದಲ್ಲಿ ಇರುವ ಪ್ರಮುಖರು ಕಾರ್ಪೊರೇಟ್‌ ಕಂಪನಿಗಳ ವಿರುದ್ಧ ಹೇಳಿಕೆ ನೀಡಿದರೆ ಅವುಗಳ ವರ್ಚಸ್ಸಿಗೆ ಚ್ಯುತಿಯಾಗುತ್ತದೆ ಮತ್ತು ಹೂಡಿಕೆಗಳಿಗೆ ಪ್ರತಿಕೂಲ ಉಂಟಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶ ಜಾರಿಯಾಗದಂತೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೀಗಾಗಿ, ನಾವು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಜತೆಗೆ ಅರ್ಜಿಯ ಇತ್ಯರ್ಥವೂ ಆಗಿಲ್ಲ. ಹೀಗಾಗಿ, ಸಂವಿಧಾನದ 136ನೇ ವಿಧಿಯ ಅನ್ವಯ ಸಲ್ಲಿಕೆ ಮಾಡಲಾಗಿರುವ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.
ಫೆ.17ರಂದು ನೈಸ್‌ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆ, ನ್ಯಾ.ಡಿ.ವೈ.ಚಂದ್ರಚೂಡ್‌ ಮತ್ತು ನ್ಯಾ.ಹಿಮಾ ಕೋಹ್ಲಿ ನೇತೃತ್ವದ ನ್ಯಾಯಪೀಠ ದೇವೇಗೌಡರಿಗೆ ಹೇಳಿಕೆ ನೀಡದಂತೆ ಸೂಚನೆ ನೀಡಿತ್ತು

ಹತ್ತು ವರ್ಷಗಳ ಹಿಂದೆ ಸಂದರ್ಶನವೊಂದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಂದಿ ಇನಾಸ್ಟ್ರಕ್ಟರ್‌ ಕಾರಿಡಾರ್‌ ಎಂಟರ್‌ಪ್ರೈಸಸ್‌ (ನೈಸ್‌) ವಿರುದ್ಧ ಮಾತನಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 2021 ಜೂ.17ರಂದು ಕೆಳಹಂತದ ಕೋರ್ಟ್‌ ಒಂದು ದೇವೇಗೌಡರಿಗೆ 2 ಕೋಟಿ ರೂ. ಪರಿಹಾರ ನೀಡುವಂತೆ ಆದೇಶ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next