Advertisement

Siddaramaiah ಅವರಿಗೆ ರಿಲೀಫ್: ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್

05:35 PM Sep 09, 2024 | Team Udayavani |

ಬೆಂಗಳೂರು: ಮುಡಾ ಭೂ ಹಗರಣಕ್ಕೆ(MUDA) ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ (ಸೆ9) ಕರ್ನಾಟಕ ಹೈಕೋರ್ಟ್​ ಮತ್ತೆ ಮುಂದೂಡಿಕೆ ಮಾಡಿದೆ.

Advertisement

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಇಂದಿನ ವಾದ , ಪ್ರತಿವಾದ ಆಲಿಸಿದ ಬಳಿಕ ಮುಂದಿನ ವಿಚಾರಣೆಯನ್ನು ಸೆ.12 ಕ್ಕೆ ಮುಂದೂಡಿದ್ದಾರೆ. ಅಂದು ಸಿಎಂ ಸಿದ್ದರಾಮಯ್ಯ ಅವರ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮುಂದುವರಿಸಲಿದ್ದಾರೆ.

ಸಿದ್ದರಾಮಯ್ಯ ಪರ ಇಂದು ಹಿರಿಯ ವಕೀಲ ರವಿ ವರ್ಮ ಕುಮಾರ್ ವಾದ ಮಂಡನೆ ಮಾಡಿದರು. ಸರಕಾರದ ಪರ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್ ಅವರು ವಾದ ಮಂಡನೆ ಮಾಡಿದರು.”ಪತ್ನಿಯ ಆಸ್ತಿಯನ್ನು ಪತಿಯ ಆಸ್ತಿ ಎಂದು ಪರಿಗಣಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಮೇಲಿನ ಆರೋಪಗಳಿಗೆ ಎಲ್ಲ ರೀತಿಯ ಪುರಾವೆಗಳಿವೆ” ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next