Advertisement

ಹೈಕೋರ್ಟ್ ನಲ್ಲೂ ಸಿಕ್ಕಿಲ್ಲ ರಿಲೀಫ್; ಇನ್ನೂ 14 ದಿನ ಡಿಕೆ ಶಿವಕುಮಾರ್ ಗೆ ತಿಹಾರ್ ಜೈಲೇ ಗತಿ

09:48 AM Oct 01, 2019 | Nagendra Trasi |

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಅಕ್ಟೋಬರ್ 14ಕ್ಕೆ ಮುಂದೂಡಿದೆ. ಇದರಿಂದಾಗಿ ಡಿಕೆ ಶಿವಕುಮಾರ್ ಇನ್ನೂ 14 ದಿನಗಳ ಕಾಲ ತಿಹಾರ್ ಜೈಲಿನಲ್ಲಿಯೇ ಕಳೆಯುವಂತಾಗಿದೆ.

Advertisement

ಅಕ್ರಮ ಆಸ್ತಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 25ರಂದು ದೆಹಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಜಯ್ ಕುಮಾರ್ ಕುಹರ್, ಜಾಮೀನು ಅರ್ಜಿಯನ್ನು ವಜಾಗೊಳಿಸಿ ತೀರ್ಪು ನೀಡಿದ್ದರು.

ಏತನ್ಮಧ್ಯೆ ಡಿಕೆ ಶಿವಕುಮಾರ್ ಪರ ವಕೀಲರು, ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ದೆಹಲಿ ಹೈಕೋರ್ಟ್ ಗೆ ಸೋಮವಾರ ಅರ್ಜಿ ಸಲ್ಲಿಸಿದ್ದರು.

ಆದರೆ ದೆಹಲಿ ಹೈಕೋರ್ಟ್ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 14ಕ್ಕೆ ಮುಂದೂಡಿ ಆದೇಶ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next