Advertisement

ಸಾತನೂರು ಘಟನೆಗೆ ಸಿಎಂ, ಎಚ್‌ಎಂ ಹೊಣೆ: ಡಿ.ಕೆ. ಶಿವಕುಮಾರ್‌

11:40 PM Apr 03, 2023 | Team Udayavani |

ಬೆಂಗಳೂರು: ಸಾತನೂರಿನಲ್ಲಿ ನೈತಿಕ ಪೊಲೀಸ್‌ಗಿರಿಯಿಂದ ಒಬ್ಬ ವ್ಯಕ್ತಿಯ ಕೊಲೆಯಾಗಿದ್ದು, ಇದಕ್ಕೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರೇ ಹೊಣೆಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

Advertisement

ಈ ಕೊಲೆಗೆ ಕಾರಣವಾದ ವ್ಯಕ್ತಿ ಬಿಜೆಪಿ ನಾಯಕರಿಗೆ ಆಪ್ತನಾಗಿದ್ದು, ಈ ನೈತಿಕ ಪೊಲೀಸ್‌ಗಿರಿಗೆ ಕುಮ್ಮಕ್ಕು ನೀಡುತ್ತಿರುವ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಇದರ ಹೊಣೆ ಹೊರಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದರ ಜತೆಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಘೋಷಿಸಬೇಕೆಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಸರಕಾರವು ಅಲ್ಪಸಂಖ್ಯಾಕರಿಗೆ ಬದುಕಲು ಅವಕಾಶ ಕಲ್ಪಿಸಬೇಕು. ಚುನಾವಣೆ ಸಮಯದಲ್ಲಿ ಇಂತಹ ಗೊಂದಲ ಮಾಡುವುದು ಸರಿಯಲ್ಲ. ಕೂಡಲೇ ಮೃತನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು. ಹತ್ಯೆಯಲ್ಲಿ ಭಾಗಿಯಾದವನ್ನು ತತ್‌ಕ್ಷಣ ಬಂಧಿಸಬೇಕು. ಇಲ್ಲದಿದ್ದರೆ, ಇದಕ್ಕೆ ಅಧಿಕಾರಿಗಳೂ ಹೊಣೆ ಆಗುತ್ತಾರೆ ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next