Advertisement

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮರು ಚಾಲನೆ

06:45 AM Jun 17, 2018 | |

ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮರು ಚಾಲನೆ ಸಿಕ್ಕಿದ್ದು, ಜೂ.18ರಿಂದ ಕೌನ್ಸೆಲಿಂಗ್‌
ಆರಂಭವಾಗುವ ಸಾಧ್ಯತೆ ಇದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್‌.ಮಹೇಶ್‌ ಅವರ ನೇತೃತ್ವದಲ್ಲಿ
ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

Advertisement

ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿಯನ್ವಯ
ಕೌನ್ಸೆಲಿಂಗ್‌ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಈ ಹಿಂದಿನ ಸರ್ಕಾರ ರೂಪಿಸಿದ್ದ ನೀತಿ ನಿಯಮದಂತೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.

ಶೇ.8ರಷ್ಟಿದ್ದ ವರ್ಗಾವಣೆ ಪ್ರಮಾಣವನ್ನು ಶೇ.15ಕ್ಕೆ ಏರಿಸಲಾಗಿದೆ. ಜಿಲ್ಲೆಯ ಹೊರಗೆ ಶೇ.3 ಹಾಗೂ ಜಿಲ್ಲೆಯ
ಒಳಗೆ ಶೇ.5ರಷ್ಟು ವರ್ಗಾವಣೆಗೆ ಅವಕಾಶ ಇದೆ. ಒಟ್ಟು ಮಂಜುರಾದ ಶಿಕ್ಷಕರ ಹುದ್ದೆಗಳಲ್ಲಿ ಶೇ.20ರಷ್ಟು ಖಾಲಿ
ಇದ್ದರೆ ಅಂತಹ ಜಿಲ್ಲೆಯ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಕರುಣಿಸದೇ ಇರುವ ಬಗ್ಗೆ ಚರ್ಚೆ ಇನ್ನು ಇತ್ಯರ್ಥವಾಗಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next