Advertisement

ಕಂಕನಾಡಿ, ವೆಲೆನ್ಸಿಯಾ, ನಂದಿಗುಡ್ಡ:ಅನಧಿಕೃತ ಗೂಡಂಗಡಿ ತೆರವು

09:54 AM Jul 14, 2018 | Team Udayavani |

ಮಹಾನಗರ: ನಗರದ ಕಂಕನಾಡಿ ಫಾದರ್‌ ಮುಲ್ಲರ್‌ ಆಸ್ಪತ್ರೆ ಎದುರು, ವೆಲೆನ್ಸಿಯಾ ಮತ್ತು ನಂದಿಗುಡ್ಡ ವರೆಗೆ ರಸ್ತೆ ಬದಿ ಇದ್ದ ಅನಧಿಕೃತ ಗೂಡಂಗಡಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಶುಕ್ರವಾರ ನಡೆಯಿತು. 

Advertisement

ಪಾಲಿಕೆಯ ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಆಶ್ರಯದಲ್ಲಿ ಪಾಂಡೇಶ್ವರ ಪೊಲೀಸರ ಸಹಕಾರದಲ್ಲಿ ಕಾರ್ಯಾಚರಣೆ ನಡೆದಿದ್ದು, ಈ ಸಂದರ್ಭದಲ್ಲಿ 10ಕ್ಕೂ ಅಧಿಕ ಗೂಡಂಗಡಿಗಳನ್ನು ತೆರವು ಮಾಡಲಾಯಿತು.
ಪಾಲಿಕೆಯ ಕಂದಾಯ ಅಧಿಕಾರಿ ಪ್ರವೀಣ್‌ಚಂದ್ರ ಕರ್ಕೇರಾ ಮತ್ತು ಆರೋಗ್ಯ ಅಧಿಕಾರಿ ಡಾ| ಮಂಜಯ್ಯ ಶೆಟ್ಟಿ ಅವರು ಈ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.

ಅನಧಿಕೃತ ಗೂಡಂಗಡಿಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅವುಗಳನ್ನು ತೆರವು ಮಾಡಲಾಯಿತು ಎಂದು ಪಾಲಿಕೆಯ ಕಂದಾಯ ಅಧಿಕಾರಿ ಪ್ರವೀಣ್‌ಚಂದ್ರ ಕರ್ಕೇರಾ ಅವರು ತಿಳಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next